ಮೊಳಕಾಲ್ಮುರು: ಮೊಳಕಾಲ್ಮುರು ಪಟ್ಟಣದ ಕೆ.ಇ.ಬಿ ವೃತ್ತದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಎಂಎಲ್ಎ ತಿಪ್ಪೇಸ್ವಾಮಿ ಸಚಿವರ ಕ್ಷೇತ್ರದಲ್ಲಿ ಬಿಜೆಪಿ ಅಲೆ ಇರುವುದು ಸತ್ಯಕ್ಕೆ ದೂರವಾದ ಮಾತು .ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇಕಡಾ 80 ರಷ್ಟು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಗೆದ್ದು ಬೀಗಿದ್ದಾರೆ. ಮೊಳಕಾಲ್ಮುರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ ಇದನ್ನು ಮುಂದಿನ ದಿನಗಳಲ್ಲಿ ,ಜಿಲ್ಲಾ ಪಂಚಾಯತ್ ,ತಾಲ್ಲೂಕು ಪಂಚಾಯಿತಿ,ಚುನಾವಣೆಯಲ್ಲಿ ಮತ್ತೆ ನಾವು ಸಾಬೀತು ಮಾಡುತ್ತೇವೆ. ಇಲ್ಲಿ 3 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ .ಇಲ್ಲಿ ನೀವು ಸಚಿವರಾಗಿದ್ದೀರಿ ನಿಮ್ಮದೇ ಸರ್ಕಾರ,ಮತ್ತೆ ಏಕೆ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಅವರಿಗೆ ಜನಪರ ಕಾಳಜಿ ಇಲ್ಲ ಅನ್ಯರೊಡನೆ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಜತೆ ಮಾತನಾಡಿ ಗ್ರಾಮ ಪಂಚಾಯಿತಿಯಲ್ಲಿ ಹೆಚ್ಚಾಗಿ ಯುವ ಜನತೆ ವಿಜೇತರಾಗಿರುವುದು ಉತ್ತಮ ಬೆಳವಣಿಗೆ ಎಂದರು ಬಡ ಹಾಗೂ ಕೆಳವರ್ಗದ ಜನರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಎಂದು ಗುಡುಗಿದರು .
ವರದಿ-ಪಿ.ಎಂ ಗಂಗಾಧರ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು