ಇಂಡಿ: ತೊಗರಿ ರಾಶಿ ಮಾಡುವ ವೇಳೆ ಆಯತಪ್ಪಿ ತೊಗರಿ ಮಷೀನ್ ನಲ್ಲಿ ಸಿಲುಕಿಕೊಂಡು 36 ವರ್ಷದ ಸುಜಾತ ಅಮಸಿದ್ಧ ಬಗಲಿ ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಕ್ಕಬೇವನೂರ ಗ್ರಾಮದಲ್ಲಿ ನಡೆದಿದೆ. ಇನ್ನೂ ಸುಜಾತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ-ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ