Connect with us

ಚಾಮರಾಜನಗರ

ವಿಷಪ್ರಸಾದ ಆರೋಪಿ ಮಹದೇವಸ್ವಾಮಿ ಗೂಂಡಾಗಿರಿ ವೀಡಿಯೋ ವೈರಲ್

Published

on

ಮೈಸೂರು, ಡಿಸೆಂಬರ್ 19 : ವಿಷಪ್ರಸಾದ ಪ್ರಕರಣದಲ್ಲಿ ಮೊದಲು ಹೆಸರು ಥಳಕು ಹಾಕಿಕೊಂಡಿದ್ದು ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿಯವರದ್ದು. ಇವರ ಹೆಸರು ಕುಕೃತ್ಯದಲ್ಲಿ ಇದೇ ಮೊದಲೇನಲ್ಲ. ಈ ಹಿಂದೆ ಅವರು ರೌಡಿಸಂ ನಡೆಸಿದ್ದರು ಎನ್ನಲಾಗಿದೆ.

ಮಹದೇವಸ್ವಾಮಿ ವಿರುದ್ಧ ಸಂಗಮೇಶ್ ಎಂಬುವವರು ಆರೋಪಿಸಿದ್ದು, ಸಂಗಮೇಶ್ ಎಂಬುವವರಿಗೆ ಸ್ವಾಮೀಜಿ ಕಳೆದ ಕೆಲವು ದಿನಗಳ ಕೆಳಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾದ ವೀಡಿಯೋವೊಂದು ವೈರಲ್ ಆಗಿದೆ. ಸಂಗಮೇಶ್ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಮಠದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಷಪ್ರಸಾದ ಪ್ರಕರಣ: ತಡರಾತ್ರಿ ಸಾಲೂರು ಮಠದ ಶ್ರೀಗಳು ಪೊಲೀಸ್ ಕಸ್ಟಡಿಗೆ

ಸರಿಯಾಗಿ ಒಂದು ವರ್ಷದ ಹಿಂದೆ ಮಠದಲ್ಲಿ ಮಹದೇವಸ್ವಾಮಿ ಗುಂಡಾಗಿರಿ ನಡೆಸಿ, ಸಾರ್ವಜನಿಕವಾಗಿ ಹಲ್ಲೆ ಮಾಡಿ ಎಳೆದಾಡಿರುವ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು ಸಾಕಷ್ಟು ಅನುಮಾನ ಮೂಡಿಸಿದೆ.

ಸಂಗಮೇಶ್ ಎಂಬುವವರು ಸಾಲೂರು ಮಠಕ್ಕೆ ಹಣಕಾಸು ಸಹಾಯ ಮಾಡುತ್ತಿದ್ದರು. ಅಲ್ಲದೇ ಹಿರಿಯ ಸ್ವಾಮೀಜಿಯೊಂದಿಗೆ ಶಿಷ್ಯತ್ವ ಚೆನ್ನಾಗಿತ್ತು ಎಂಬ ಕಾರಣಕ್ಕಾಗಿ ಸಂಗಮೇಶ್ ಗೆ ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ತಮ್ಮ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯುತ್ ಬೇಲಿ ಹಾಕಿಸಿ ಆನೆಯೊಂದನ್ನು ಸಾಯಿಸಿದ ಹೆಸರಲ್ಲೂ ಇವರ ಹೆಸರು ಕೇಳಿಬಂದಿತ್ತು. ಅಲ್ಲದೇ ಮಾರಮ್ಮನ ದೇಗುಲದ ದುಮ್ಮಪ್ಪ ಸ್ವಾಮೀಜಿ ಎಂಬುವವರ ಸಾವೀಗೂ ಇವರೇ ಕಾರಣ ಎಂಬ ಮಾತು ಕೇಳಿ ಬರುತ್ತಿದೆ. ಇಮ್ಮಡಿ ಸ್ವಾಮೀಜಿಯವರ ನಡವಳಿಕೆ ವಿಚಾರವಾಗಿ ಭಕ್ತರಲ್ಲೂ ಅಸಮಾಧಾನವಿದೆ ಎನ್ನಲಾಗಿದೆ.

ತಿನ್ನುವ ಪ್ರಸಾದಕ್ಕೆ ವಿಷ ಹಾಕಿದ್ದು ನಾನೇ: ತಪ್ಪೊಪ್ಪಿಕೊಂಡ ಮಹಿಳೆ?

ವಿಷ ಪ್ರಸಾದ ದುರಂತದ ಪ್ರಮುಖ ಆರೋಪಿಗಳಾದ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮೀಜಿ, ವ್ಯವಸ್ಥಾಪಕ ಮಾದೇಶ್, ಮಾದೇಶನ ಪತ್ನಿ ಅಂಬಿಕಾ, ನಾಗದೇವತೆ ದೇವಾಲಯದ ಅರ್ಚಕ ದೊಡ್ಡಯ್ಯರನ್ನು ಕೊಳ್ಳೆಗಾಲದ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ವಿಷ ಪ್ರಸಾದವನ್ನು ಉಣಿಸಲು ಅಂಬಿಕಾ ಮುಂದಾಗಿದ್ದಾದರೂ ಏಕೆ ? ಸ್ವಾಮೀಜಿಗೂ, ಈಕೆಗೂ ಏನು ಸಂಬಂಧ ?

ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಿರುವ ಹಿನ್ನೆಲೆಯಲ್ಲಿ ಕೊಳ್ಳೆಗಾಲ ಡಿವೈಎಸ್ ಪಿ ಕಚೇರಿ ಮುಂದೆ ಜನಜಂಗುಳಿ ಕುತೂಹಲದಿಂದ ಕಾಯುತ್ತಿದ್ದು, ನ್ಯಾಯಾಲಯದ ಸುತ್ತಮುತ್ತ ವ್ಯಾಪಕ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಈ ಟೈಂನಲ್ಲಿ ಎಣ್ಣೆ ಅಂಗಡಿ ಓಪನ್..ನೋ ಚಾನ್ಸ್..

Published

on

ಚಾಮರಾಜನಗರ:ಮೇ.೩ರವರೆಗೆ ರಾಜ್ಯದ ಎಲ್ಲೂ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ರಾಜ್ಯಕ್ಕೆ ಇದರಿಂದ ನಷ್ಟವಾಗುತ್ತಿದ್ದರೂ ರಾಜ್ಯದ ಜನತೆ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಚಾಮರಾಜನಗರದ ಎಪಿಎಂಸಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ,ಸಾಮಾಜಿಕ ಅಂತರವನ್ನು ಎಲ್ಲ ಕಡೆಯೂ ಕಾಯ್ದುಕೊಳ್ಳಲು ಎಷ್ಟೇ ಮನವಿ ಮಾಡಿದರೂ ಕೆಲವು ಕಡೆ ವಿಫಲವಾಗುತ್ತಿದೆ. ಇಂಥ ಸಂದರ್ಭದಲ್ಲಿ ಬಾರ್‌ಗಳನ್ನು ತೆರೆದರೆ ಕಥೆ ಏನು? ಈ ನಿಟ್ಟಿನಲ್ಲಿ ಸದ್ಯಕ್ಕೆ ಈ ನಿರ್ಧಾರ ಮಾಡಲಾಗಿಲ್ಲ ಅಂತ ಸಚಿವರು ತಿಳಿಸಿದರು.
ಇನ್ನು ಕೇಂದ್ರ ಸರ್ಕಾರ ೧ ಲಕ್ಷ ಮೆಟ್ರಿಕ್ ಟನ್ ತೊಗರಿಯನ್ನು ಬೆಂಬಲ ಬೆಲೆ ಆಧಾರದಲ್ಲಿ ಖರೀದಿಸಲು ಅನುಮತಿ ನೀಡಿದೆ ಅಂತ ಸ್ಪಷ್ಟಪಡಿಸಿದ್ರು..
ಇದೇ ವೇಳೆ ಪಾದರಾಯನಪುರ ಪ್ರಕರಣಕ್ಕೆ ಸಂಬAಧಿಸಿದAತೆ ಮಾತನಾಡಿ, ಇಡೀ ಪ್ರಪಂಚವೇ ಕೊರೊನಾಗೆ ಸಿಲುಕಿದೆ. ಕೋವಿಡ್ ಬಂದAತಹ ವ್ಯಕ್ತಿಗಳನ್ನು ಪರೀಕ್ಷೆಗೊಳಪಡಿಸಲು ಅಧಿಕಾರವಿದೆ. ಎಂಎಲ್‌ಎಯನ್ನು ಕೇಳಿಕೊಂಡು ಬರಬೇಕು, ಅವರು ಅವಿದ್ಯಾವಂತರು ಎನ್ನುವುದು ಸರಿಯಲ್ಲ. ರೌಡಿಸಂ, ಮ್ಯಾನ್ ಹ್ಯಾಂಡಲಿAಗ್ ಮಾಡುವುದು ಸರಿಯಲ್ಲ. ಗಲಭೆಕೋರರನ್ನು ಎರಡು ವರ್ಷ ಜೈಲಿಗೆ ಕಳಿಸಲೇ ಬೇಕು ಇಲ್ಲದಿದ್ದರೆ ವೈದ್ಯರು, ಆಶಾ ಕಾರ್ಯಕರ್ತೆಯರು ಹೇಗೆ ತಾನೆ ಕೆಲಸ ಮಾಡಲು ಮುಂದೆ ಬರುತ್ತಾರೆ ಎಂದು ಕಿಡಿಕಾರಿದರು. ಸಹಕಾರ ಬ್ಯಾಂಕ್‌ಗಳಿAದ ಹೊಸದಾಗಿ ಸಾಲ ಕೊಡಲು ಸರ್ಕಾರ ತೀರ್ಮಾನಿಸಿದ್ದು, ಕಳೆದ ಬಾರಿ ೧೩ ಸಾವಿರ ಕೋಟಿ ರೂ. ಸಾಲ ನೀಡಲಾಗಿತ್ತು.ಈ ಬಾರಿಯೂ ಅಷ್ಟೇ ನೀಡಲಾಗುತ್ತದೆ. ಲೇವಾದೇವಿಗಾರರು, ಖಾಸಗಿ ಫೈನಾನ್ಸ್ ಕಂಪನಿಗಳು ಯಾರೂ ಕೂಡ ೩ ತಿಂಗಳವರೆಗೆ ಸಾಲ ಕಟ್ಟುವಂತೆ ಕಿರುಕುಳ ನೀಡಬಾರದೆಂದು ಈಗಾಗಲೇ ಸರ್ಕಾರ ಆದೇಶಿಸಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಚಾಮರಾಜನಗರ

Continue Reading

ಚಾಮರಾಜನಗರ

ವಿಷ ಪ್ರಸಾದ ದುರಂತ : ಸಚಿವ ಪುಟ್ಟರಂಗ ಶೆಟ್ಟಿ ನಡೆಗೆ ಖಂಡನೆ

Published

on

By

ಚಾಮರಾಜನಗರ : ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಧನ ನೀಡಲು ತಮ್ಮ ಬಳಿಗೆ ಕರೆಸಿಕೊಳ್ಳಲು ಮುಂದಾಗಿರುವ ಸಚಿವ ಪುಟ್ಟರಂಗಶೆಟ್ಟಿ ಅವರ ನಡೆಗೆ ಖಂಡನೆ ವ್ಯಕ್ತವಾಗಿದೆ.

ಇಂದು ಮಧ್ಯಾಹ್ನ 2.30 ಕ್ಕೆ ಹನೂರಿನ ಪ್ರವಾಸಿ ಮಂದಿರದಲ್ಲಿ ಪರಿಹಾರ ಧನ ವಿತರಣಾ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದು, ಪರಿಹಾರ ಪಡೆಯಲು ಮೃತರ ಕುಟುಂಬಸ್ಥರು ಸುಮಾರು 50 ಕಿ.ಮೀ ಪ್ರಯಾಣಿಸಬೇಕಾಗಿದೆ. ಮತ ಕೇಳುವಾಗ ಜನಪ್ರತಿನಿಧಿಗಳು ಮನೆ ಬಾಗಿಲಿಗೆ ಬರುತ್ತಾರೆ. ಆದರೆ, ಪರಿಹಾರ ಪಡೆಯಲು ಸಚಿವರ ಬಳಿ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ವಿಷ ಪ್ರಸಾದ ಸೇವಿಸಿ ಒಂದೇ ಗ್ರಾಮ ಬಿದರಹಳ್ಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹೀಗಿರುವಾಗ ಗ್ರಾಮಕ್ಕೆ ಸಚಿವರು ಬರುವ ಬದಲು ಜನರನ್ನೇ ತಮ್ಮ ಬಳಿ ಕರೆಸಿಕೊಳ್ಳುತ್ತಿದ್ದಾರೆ. ಕುಟುಂಬದವರು ಮೊದಲೇ ಕುಟುಂಬಸ್ಥರನ್ನು ಕಳೆದುಕೊಂಡು ದುಃಖಿತರಾಗಿದ್ದು, ಪರಿಹಾರ ಹಣ ಪಡೆಯಲು 50 ಕಿ.ಮೀ ಪ್ರಯಾಣಿಸಬೇಕಾಗಿದೆ.

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetparkbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkey girişbetturkeyBinance Kayıt OlmaBetnano girişPusulabetsuperbetinbetturkeycasibom