Connect with us

ಚಿಕ್ಕಬಳ್ಳಾಪುರ

ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

Published

on

ಅಂಗಡಿಗಳ ಮೇಲೆ ದಾಳಿ – ಪ್ಲಾಶ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಶಿಡ್ಲಘಟ್ಟ :ನಗರದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ಮಾತನಾಡಿದರು.

ಸಾರ್ವಜನಿಕರು ಪ್ಲಾಸ್ಟಿಕ್ ಬಳಸುವುದನ್ನು ಸಂಪೂರ್ಣ ನಿಲ್ಲಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ವರ್ತಕರು ಮತ್ತು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪ್ಲಾಸ್ಟಿಕ್ ಬಳಸದೇ ಇರಲು ಸಂಕಲ್ಪ ಮಾಡಬೇಕು ಎಂದು ಅವರು ತಿಳಿಸಿದರು.

ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಅಂಗಡಿಗೂ ಭೇಟಿ ನೀಡಿ ಅಲ್ಲಿರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಈಗಾಗಲೇ ಸಾಕಷ್ಟು ಬಾರಿ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದ್ದರೂ ಲೆಕ್ಕಿಸದೇ ಬಳಸುತ್ತಿರುವ ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಜೊತೆಗೆ ಅಂತಹವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ನಗರದ ಸಾರ್ವಜನಿಕರೂ ಸಹ ಈ ಕಾರ್ಯಕ್ಕೆ ಕೈ ಜೋಡಿಸುವ ಮೂಲಕ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಸಂಕಲ್ಪ ಮಾಡಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲು ಸಾಧ್ಯವಾಗುತ್ತದೆ ಎಂದರು.

ಪ್ರತಿಯೊಂದು ಅಂಗಡಿಗಳವರೂ ನಗರಸಭೆಯಿಂದ “ಟ್ರೇಡ್ ಲೈಸೆನ್ಸ್” ಪಡೆಯಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂಗಡಿಗಳನ್ನು ಮುಚ್ಚಿಸಲಾಗುವುದೆಂದು ತಿಳಿಹೇಳಿ, ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ದಾಳಿಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಆಂಜಿನಪ್ಪ, ಸಯೀದಾ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

ಅಕ್ಕನ ಸುಖ ಸಂಸಾರಕ್ಕಾಗಿ ಜಗಳವಾಡಿ ಬಾವನಿಂದಲೇ ಹತ್ಯೆಯಾದ ಬಾಮೈದ..!

Published

on

By

ಚಿಕ್ಕಬಳ್ಳಾಪುರ: ಅಕ್ಕನ ಸಂಸಾರ ಸುಖವಾಗಿರಲಿ ಎಂದು ಬಾವನ ಅನೈತಿಕ ಸಂಬಂಧ ಪ್ರಶ್ನಿಸಿದ ಹಿನ್ನೆಲೆ ಬಾವನೇ ಬಾಮೈದನನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಮ್ರಾನ್ ಖಾನ್ (25) ಕೊಲೆಯಾದ ಯುವಕ, ಬಾವ ಸಾಧಿಕ್ ಪಾಷಾ@ಚಾಂದ್, ಟಿಪ್ಪು, ಸಮಿವುಲ್ಲಾ, ಸಯ್ಯದ್ ಕೊಲೆ ಮಾಡಿರುವ ಆರೋಪಿಗಳು. ಕಳೆದ 5 ವರ್ಷಗಳ ಹಿಂದೆ ರುಕ್ಸಾನಾ ಎಂಬಾಕೆಯನ್ನು ಚಾಂದ್ ಪಾಷಾ ಮದವೆಯಾಗಿದ್ದ ನಂತರ ಮುಮ್ತಾಜ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಷಯ ತಿಳಿದ ಇಮ್ರನ್ ಖಾನ್ ಸಾಕಷ್ಟು ಬಾರಿ ಚಾಂದ್ ಪಾಷಾ ಜೊತೆಗೆ ಜಗಳ ಮಾಡಿದ್ದ. ಇತ್ತೀಚೆಗೆ ಇದೇ ವಿಚಾರವಾಗಿ ಬಾವನ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದ. ಇದರಿಂದ ಕೋಪಿತಗೊಂಡ ಚಾಂದ್ ಪಾಷಾ ಸೇಡಿಗೆ ಸೇಡು ತೀರಿಸಿಕೊಳ್ಳಲು ಬಾಮೈದನ ಕೊಲೆಗೆ ತನ್ನ ಸ್ನೇಹಿತರೊಂದಿಗೆ ಪ್ಲಾನ್ ರೂಪಿಸಿದ್ದ. ಅದರಂತೆ ಜನವರಿ 3ನೇ ತಾರೀಖು ಆಂಧ್ರಪ್ರದೇಶದ ಹಿಂದೂಪುರ ಮೂಲದ ಲಾರಿ ಚಾಲಕರಿಂದ ಬರ್ಭರವಾಗಿ ದೇಹದೆಲ್ಲೇಡೆ ಡ್ರಾಗರ್ ನಿಂದ ಚುಚ್ಚಿ ಚುಚ್ಚಿ, ಮರ್ಮಾಂಗ ಕತ್ತರಿಸಿ ಕೊಲೆ ಮಾಡಿಸಿ ಎಸ್ಕೇಪ್ ಆಗಿದ್ದ.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಗೌರಿಬಿದನೂರು ಪೊಲೀಸರು, ನಾಲ್ಕೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕೊಲೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳ ಬೆನ್ನು ಹತ್ತಿದ್ದ ಪೊಲೀಸರು, ಚಾಂದ್ ಪಾಷಾ 2ನೇ ಹೆಂಡತಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳ ಕುರಿತು ಮುಮ್ತಾಜ್ ಬಾಯಿ ಬಿಟ್ಟಿದ್ದಾಳೆ. ಗೌರಿಬಿದನೂರು ವೃತ್ತ ನಿರೀಕ್ಷಕ ಎಸ್.ರವಿ ಹಾಗೂ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Continue Reading

ಚಿಕ್ಕಬಳ್ಳಾಪುರ

ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮುಂದಾದ ಶ್ರೀ ಧರ್ಮಸ್ಥಳ ಯೋಜನೆ.!

Published

on

By

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದ ಕೆರೆ ಅಂಗಳದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಘದ ಅಡಿಯಲ್ಲಿ ತಾಲ್ಲೂಕಿನ ಬೋದುಗೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ತದನಂತರ ಅದ್ಯಕ್ಷತೆ ವಹಿಸಿದ ಕೆರೆ ಬಳಕೆದಾರರ ಸಂಘದ ಅದ್ಯಕ್ಷ ವೆಂಕಟಸ್ವಾಮಿ ರೆಡ್ಡಿ ಮಾತನಾಡಿ ಈಗಾಗಲೆ ಗ್ರಾಮ ಪ್ರದೇಶಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಪೂಜ್ಯರ ಸಮಕ್ಷಮದಲ್ಲಿ ಕೆರೆ ಹೊಳೆತ್ತುವ ಕಾರ್ಯ ನಡೆಯುತ್ತಿದಿದ್ದು, ಇಂದು ನಮ್ಮ ಬೋದಗೂರು ಗ್ರಾಮದ ಕೆರೆ ಹೂಳೆತ್ತಲು 18.50 ಲಕ್ಷ ಬಿಡುಗಡೆ ಮಾಡಿ ಪುಣ್ಯವಂತರಾಗಿದ್ದಾರೆ ಎಂದರು. ಮಳೆ ನೀರು ಸರಾಗವಾಗಿ ಹರಿಯದೆ ಕೆರೆಗೆ ನೀರು ಬರುತ್ತಿಲ್ಲ ಮೊದಲು ನೀರು ಬರಲು ಕಾಲುವೆಗಳು ತೆರವುಗೊಳಿಸಿ ಸ್ವಚ್ಚಗೊಳಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ವೃದ್ಧರಿಗೆ ಮಾಶಾಸನ ಬಿಡುಗಡೆಗೊಳಿಸಿದರು.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Continue Reading

ಚಿಕ್ಕಬಳ್ಳಾಪುರ

ಭಿಕ್ಷುಕನಿಗೆ ಊಟ ನೀಡಿ ಮಾನವೀಯತೆ ಮೆರೆದ ಎಎಸ್ಐ..!

Published

on

By

ಚಿಕ್ಕಬಳ್ಳಾಪುರ: ಪೊಲೀಸರ ಕುರಿತು ಸಾಕಷ್ಟು ನಕಾರಾತ್ಮಕ ಆಲೋಚನೆಗಳೇ ಕಣ್ಣ ಮುಂದೆ ಬರುತ್ತದೆ, ಆದರೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಮಾನವೀಯತೆ ಮೆರದು ಜನರ ಮೆಚ್ಚಿಗೆಗಳಿಸಿದ್ದಾರೆ. ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಊಟವಿಲ್ಲದೆ ಅಸ್ವಸ್ಥಗೊಂಡಿದ್ದ ಭಿಕ್ಷುಕನನ್ನು ಗಮನಿಸಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣರಾಗಿದ್ದಾರೆ. ಈ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ಎಎಸ್ಐ ಸೋಮಶೇಖರ್ ಕಾರ್ಯವೈಕರಿ ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html deneme bonusu veren sitelercasino sitelerimıknatısmaç izle