ಕ್ರೀಡೆ

ಪಾಂಡ್ಯ, ರಾಹುಲ್​ಗೆ ರಿಲೀಫ್ ಕೊಟ್ಟ ಬಿಸಿಸಿಐ

Published

on

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಆಟಗಾರರಾದ ಕೆ.ಎಲ್​. ರಾಹುಲ್​ ಮತ್ತು ಹಾರ್ದಿಕ್​ ಪಾಂಡ್ಯ ಅವರ ಮೇಲಿದ್ದ ಅಮಾನತ್ತಿನ ಶಿಕ್ಷೆಯನ್ನು ಇದೀಗ ಬಿಸಿಸಿಐ ಹಿಂಪಡೆದಿದೆ. ಬಾಲಿವುಡ್​ ನಿರ್ದೇಶಕ, ನಟ ಮತ್ತು ನಿರೂಪಕ ಕರಣ್​ ಜೋಹರ್​ ನಡೆಸಿಕೊಡುವ ಕಾಫಿ ವಿತ್​ ಕರಣ್​ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಮೂಲಕ ಬಿಸಿಸಿಐ ಕೆಂಗಣ್ಣಿಗೆ ಇಬ್ಬರೂ ಆಟಗಾರರು ಗುರಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂದರ್ಶನದಲ್ಲಿ ಇಬ್ಬರೂ ಆಟಗಾರರು ಆಡಿದ ಮಾತುಗಳಿಗೆ
ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಇದೀಗ ಆಲ್​ ರೌಂಡರ್​ ಹಾರ್ದಿಕ್​ ಪಾಂಡ್ಯ ಮತ್ತು ಓಪನರ್​ ಕೆ.ಎಲ್​. ರಾಹುಲ್​ ಅವರಿಗೆ ಬಿಸಿಸಿಐ ಕೊಂಚ ರಿಲೀಫ್​ ನೀಡಿದೆ. ಬಿಸಿಸಿಐನ ನಿರ್ವಾಹಕ ಸಮಿತಿ ಇಬ್ಬರು ಆಟಗಾರರ ಮೇಲಿದ್ದ ಮಧ್ಯಂತರ ಅಮಾನತ್ತು ಆದೇಶವನ್ನು ತಕ್ಷಣಕ್ಕೆ ಆಚರಣೆಗೆ ಬರುವಂತೆ ಹಿಂಪಡೆದಿದೆ.

Click to comment

Trending

Exit mobile version