Connect with us

ಗುಲಬರ್ಗಾ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ಹಿನ್ನಲೆ: ಕೇಂದ್ರದ ವಿರುದ್ಧ ಗರಂ ಆದ ಮಲ್ಲಿಕಾರ್ಜುನ ಖರ್ಗೆ

Published

on

ಕಲಬುರಗಿ : ಕೇಂದ್ರ ಸರ್ಕಾರ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಸಿಗಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವು. ಈ ಹಿಂದೆ ಕೂಡ ಕರ್ನಾಟಕ ಸರ್ಕಾರದಿಂದ, ಸಂಸದರಿಂದ ಮನವಿ ಮಾಡಿದ್ದೇವು. ಆದರೆ ಬಿಜೆಪಿ ಸರ್ಕಾರ ಯಾವುದನ್ನೂ ಗಮನಕ್ಕೆ ತೆಗೆದುಕೊಂಡಿಲ್ಲ. ತಮಗೆ ಬೇಕಾದಂತಹ ವ್ಯಕ್ತಿಗಳಿಗೆ ಪುರಸ್ಕಾರ ದೊರೆತಿದೆ ಇದು ನನಗೆ ಬೇಸರ ತರಿಸಿದೆ ಎಂದು ಹೇಳಿದ್ದಾರೆ.
ಇನ್ನೂ ಪ್ರಿಯಾಂಕಾ ಗಾಂಧಿ ಅವರು ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಿಯಾಂಕಾ ಗಾಂಧಿ
ಅವರು ರಾಜಕೀಯ ಪ್ರವೇಶ ಮಾಡಿದ್ದು, ಬಿಜೆಪಿಗೆ ಭಯ ಶುರುವಾಗಿದೆ. ಜನ ಬಿಜೆಪಿಯಿಂದ ಹಿಂದೆ
ಸರಿಯುತ್ತಿದ್ದಾರೆ. ಮಾರ್ಕೆಟಿಂಗ್ ಮಾಡಿ ಮೋದಿಯನ್ನು ಗದ್ದುಗೆ ಮೇಲೆ ಕೂರಿಸಿದ್ದರು. ಇದೀಗ ಅವರ
ವರ್ಚಸ್ಸು ಕಡಿಮೆಯಾಗಿದೆ. ಪ್ರಿಯಾಂಕಾ ರಾಜಕೀಯಕ್ಕೆ ಬಂದಿದ್ದರಿಂದ ಪಕ್ಷದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ತಿಳಿಸಿದ್ರು..

Continue Reading
Click to comment

Leave a Reply

Your email address will not be published. Required fields are marked *

ಗುಲಬರ್ಗಾ

ಉಪ ಪ್ರಾದೇಶಿಕ ಉದ್ಯೋಗಾಧಿಕಾರಿಯಾಗಿ ದಿವಾಕರ್ ಅಧಿಕಾರ ಸ್ವೀಕಾರ..!

Published

on

By

ಶಹಾಪುರ :ಶ್ರಮಪಟ್ಟರೆ ಯಾರು ಬೇಕಾದರೂ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬುದನ್ನು ಶಿವಶಾಂತವೀರ ದಿವಾಕರ್ ಸಾಬೀತುಪಡಿಸಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸಾಗಿ ಕೇಂದ್ರ ಸರ್ಕಾರದ(government of india national career service centre bangalore) ಉಪ ಪ್ರಾದೇಶಿಕ ಉದ್ಯೋಗ ಅಧಿಕಾರಿಯಾಗಿ ಇಂದು ಬೆಂಗಳೂರಿನಲ್ಲಿ (sub regional employment officer ) ಅಧಿಕಾರ ಸ್ವೀಕರಿಸಿದರು. 2017 ರಲ್ಲಿ ಭಾರತ ಯುಪಿಎಸ್ಸಿ ಪರೀಕ್ಷೆಗೆ ಒಟ್ಟು 8 ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಆ 8 ಹುದ್ದೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾದ ಶಿವಶಾಂತವೀರ ದಿವಾಕರ್.ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸಿ ಇಂದು ಕರ್ನಾಟಕಕ್ಕೆ ವರ್ಗಾವಣೆಗೊಂಡು (ministry of labour and employment directorate general of employment Bangalore ) ಕಾರ್ಯನಿರ್ವಹಿಸುತ್ತಿದ್ದಾರೆ.ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ಬಡ ಕುಟುಂಬದಲ್ಲಿ ಜನಿಸಿ ಕಠಿಣ ಪರಿಶ್ರಮದಿಂದ ವಿಧ್ಯಾಭ್ಯಾಸ ಮಾಡಿದ್ದರು. ಶಿವಶಾಂತವೀರ ದಿವಾಕರ್ ಅವರ 4 ನೇ ಹುದ್ದೆ ಇದಾಗಿದ್ದು, ತಂದೆಯ ಆಸೆಯಂತೆ ಯುಪಿಎಸ್ ಸಿ. ಪರೀಕ್ಷೆ ಬರೆದು ಅಧಿಕಾರಿ ಆಗಬೇಕೆಂಬ ಕನಸನ್ನು ಇಂದು ನನಸು ಮಾಡಿದ್ದಾರೆ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಠ ಬಿಡದೆ ಹಗಲು ಇರುಳೇನ್ನದೆ ಸತತ ಅಭ್ಯಾಸ ಮಾಡಿ ತಮ್ಮ ಗುರಿ ತಲುಪಿ ಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಶಿವಶಾಂತವೀರ ದಿವಾಕರ್ ಅವರು ಬಹಳ ಸೂಕ್ಷ್ಮ ಹಾಗೂ ಸಂವೇದನಾ ಶೀಲ ಮೃದು ಮನಸ್ಸಿನ ಸ್ನೇಹಜೀವಿಯೂ ಕೂಡ ಹೌದು ಗುರಿ ಸಾಧಿಸುವ ವಿದ್ಯಾರ್ಥಿಗಳಿಗೆ ಇವರು ಸ್ಫೂರ್ತಿಯಾಗಿದ್ದಾರೆ.ಸ್ನೇಹಿತನ ಸಾಧನೆಗೆ ಈ ಸಂದರ್ಭದಲ್ಲಿ ಸಾಹಿತಿ ಹಾಗೂ ಪತ್ರಕರ್ತ ಬಸವರಾಜ ಸಿನ್ನೂರ ಹಾಗೂ ಅಕ್ಬರ್ ಹೊಟಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ‌ ಶಹಾಪುರ.

Continue Reading

ಆರೋಗ್ಯ / HEALTH

ತಾಲೂಕು ಕೇಂದ್ರಗಳಲ್ಲೇ ಇನ್ನೂ ಮುಂದೆ ಡಿಸಿ,ಎಸ್ಪಿಗಳ ವಾಸ

Published

on

ಬೆಂಗಳೂರು: ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ಆ ತಾಲ್ಲೂಕು ಕೇಂದ್ರಗಳಲ್ಲಿಯೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಅಂದ ಹಾಗೇ ಬೆಂಗಳೂರಿನಲ್ಲಿAದು ಕೋವಿಡ್ ೧೯ ನಿಯಂತ್ರಣಕ್ಕೆ ಸಂಬAಧ ವಿಜಯಪುರ, ಯಾದಗಿರಿ,ಉಡುಪಿ, ಕಲಬುರ್ಗಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಿಎಂ,ಕೋವಿಡ್ ೧೯ ಪರೀಕ್ಷಾ ಕಿಟ್‌ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು.ಪೋಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಬೇಕಲ್ಲದೆ. ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಇವರ ಬಗ್ಗೆ ನಿಗಾ ವಹಿಸಬೇಕು. ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ ನೀಡಲಾಗಿದ್ದು, ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಲ್ಲದೆ, ಪ್ರತಿ ಗ್ರಾಮ ಹಾಗೂನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ,ಈ ಸಮಿತಿಗಳು ಕ್ರಿಯಾಶೀಲ ವಾಗಿದ್ದು,ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು.
ಇನ್ನು ತಾಲ್ಲೂಕು ಕೇಂದ್ರಗಳಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದ ಸಿಎಂ ಜೂ.೮ರಿಂದ ಸಡಲಿಕೆಗಳನ್ನು ಮಾಡುತ್ತಿರುವುದರಿಂದ ಕಟ್ಟೆಚ್ಚರ ವಹಿಸಿ,ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಮಹಾರಾಷ್ಟ್ರ ದಿಂದ ಆಗಮಿಸುತ್ತಿರುವ ವಲಸಿಗರಿಂದಕೋವಿಡ್-೧೯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು,ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಇದೇ ವೇಳೆ ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು,ಅಕ್ರಮ ಪ್ರವೇಶವನ್ನು ತಡೆಯಬೇಕು.ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.
ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು,ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಸೂಚಿಸಿದರು.
ವೀಡಿಯೋ ಸಂವಾದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ಆರೋಗ್ಯ / HEALTH

ಕ್ವಾರೈಂಟೈನ್‌ನಲ್ಲಿರುವವರಿಗೆ ದಿನ ಬಳಕೆ ವಸ್ತು ವಿತರಣೆ

Published

on

ಅಫಜಲಪುರ(ಕಲಬುರಗಿ): ಅಫಜಲಪುರ ಶಾಸಕರ ಅಭಿಮಾನಿಯಿಂದ ಕ್ವಾರೈಂಟೈನ್‌ನಲ್ಲಿರುವವರಿಗೆ ದಿನಬಳಕೆಯ ವಸ್ತುಗಳ ಜೊತೆಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು,
ಅಂದ ಹಾಗೇ ಅಫಜಲಪುರ ತಾಲ್ಲೂಕಿನ ಶಾಸಕ ಎಂ.ವೈ.ಪಾಟೀಲ್ ಅವರ ಅಭಿಮಾನಿ ಉಡಚಾಣ ಹಟ್ಟಿ ಗ್ರಾಮದ ದತ್ತು ಬಂಡಗಾರ ಕ್ವಾರೈಂಟೈನ್‌ನಲ್ಲಿರುವ ಜನರಿಗೆ ದಿನಬಳಕೆಯ ಅಗತ್ಯ ವಸ್ತುಗಳು ಮತ್ತು ಊಟ ಹಾಗೂ ಉಪಹಾರದ ಸಾಮಗ್ರಿಗಳು ತರಕಾರಿ ಜೊತೆಗೆ ಮಕ್ಕಳಿಗೆ ಬಿಸ್ಕೇಟ್ ನೀಡಿ ಮಾನವೀಯತೆ ಮೆರೆದಿದ್ದಾರೆ.
ವಿತರಣೆಯ ಸಮಯದಲ್ಲಿ ಶಾಸಕರ ಮಗನಾದ ಡಾ.ಸಂಜಯ ಕುಮಾರ ಪಾಟೀಲ್ ಮಾತನಾಡಿ, ಜನರು ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ.ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಿಕೊಂಡು ಹೋಗಿ, ಊರಿನ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದತ್ತು ಬಂಡಗಾರ ಅವರ ನೇತೃತ್ವದಲ್ಲಿ ಸದಾ ಸನ್ನದ್ಧರಾಗಿದ್ದಾರೆ.ಅಲ್ಲದೆ,ತಾಲ್ಲೂಕಿನ ಅಭಿವೃದ್ಧಿಗೆ ಎಂ.ಯೈ.ಪಾಟೀಲ್ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡರಾದ ಮಹಾದೇವಗೌಡ ಕರೂಟಿ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ ಜಮಾದಾರ್ ಉಪಸ್ಥಿತರಿದ್ದರು.

ಈರಣ್ಷ ಎಂ.ವಗ್ಗೆ ಎಕ್ಸ್ ಪ್ರೆಸ್ ಟಿವಿ ಅಫಜಲಪುರ(ಕಲಬುರಗಿ)

Continue Reading

Trending

Copyright © 2023 EXPRESS TV KANNADA

canlı maç izle selcuksports deneme bonusu deneme bonusu veren siteler bahis siteleri jojobet HackHack forumGüvenilir Bahis Siteleriyaş sınırı olmayan bahis sitelerikareasbetsiyah bayrak ayna amirkareasbet girişbetingo güncel girişdizimatgobahis girişasper casino girişbakırköy escortdeneme bonusu veren sitelerbahis forumkareasbetBitcoin Kabul Eden Bahis Sitelerigüvenilir casino siteleriGüvenilir poker siteleriSüper Ligyabancı dizitürbanlı escortFındıkzade Escortesbet girişbullbahis girişbullbahisbullbahisbenimbahis girişbenimbahisCasibom güncel girişcasino siteleriizmir escortBakırköy EscortAnkara Travestiesenyurt escortistanbul escortesenyurt escortbeylikduzu escortbeylikduzu escortbahceşehir escortesenyurt escortkayseri escortbeylikduzu escortistanbul escortistanbul escortmariobet girişmariobet girişbetpark girişonwin girişonwin girişholiganbet girişholiganbet girişbetkom girişbetist giriştipobet girişsahabet giriş30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişen iyi slot sitelerixslot giriş adresitipobet365Deneme Bonusu Veren Siteler