ಬಾಗಲಕೋಟೆ:ದೆಹಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ದೇಶದಲ್ಲಿ ಕೊರೊನಾ ವೇಗವಾಗಿ ಹಬ್ಬುತ್ತಿದೆ ಎಂದು ಆರೋಪಿಸಿ ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಗ್ರಾಮದ ಮುಸ್ಲಿಂ ವ್ಯಕ್ತಿಗಳನ್ನು ಮಾರ್ಗ ಮಧ್ಯೆ ನಿಲ್ಲಿಸಿ ಕೋಲಿನಿಂದ ಹೊಡೆದು ಹಲ್ಲೆ ಮಾಡಲಾಗಿದೆ. ನಿಮ್ಮಿಂದಲೇ ಕೊರೊನಾ ಹಬ್ಬುತ್ತಿದೆ. ನಮ್ಮ ಗ್ರಾಮದ ಕಡೆ ಬರಬೇಡಿ ಎಂದು ಜನರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಗ್ರಾಮದ ಕಡೆ ಬರುವುದಿಲ್ಲ ಬಿಟ್ಟು ಬಿಡಿ ಎಂದು ಮುಸ್ಲಿಂ ವ್ಯಕ್ತಿಗಳು ಬೇಡಿಕೊಂಡಿದ್ದಾರೆ. ಗ್ರಾಮದ ಕಡೆ ಎಂದೂ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿ ಗ್ರಾಮಸ್ಥರು ಬಿಟ್ಟು ಕಳುಹಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.