ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಕೆಲವು ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಮುಂದಾಗಿದೆ.
ಸದ್ಯ ಕೇವಲ ೧೬ ಮಂದಿ ಉಸ್ತುವಾರಿ ಸಚಿವರು ಇದ್ದು, ಇವರಿಂದ ಕೋರಾನ ವಿರುದ್ದ ಹೋರಾಟದಲ್ಲಿ ಎಲ್ಲರೂ ಕೂಡ ಸರಿಯಾಗಿ ಸರಿಯಾಗಿ ನಿರ್ವಹಣೆ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಇದರ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಉಸ್ತುವಾರಿ ಹೊಂದಿರುವವರಿಗೆ ಈ ಮೂಲಕ ರಿಲೀಫ್ ನೀಡಿ ಹೊಸ ಸಚಿವರಿಗೆ ಆ ಜಿಲ್ಲೆಗಳ ಉಸ್ತುವಾರಿ ವಹಿಸಲು ಸಿಎಂ ಮುಂದಾಗಿದ್ದಾರೆ ಅಂತ ತಿಳಿದು ಬಂದಿದೆ.