ಕೋಲಾರ : ಲಾಕ್ ಡೌನ್ ಹಿನ್ನಲೆಯಲ್ಲಿ ಶ್ರೀನಿವಾಸಪುರ ಪಟ್ಟಣಕ್ಕೆ ಕರ್ತವ್ಯಕ್ಕಾಗಿ ತೆರಳುತ್ತಿದ್ದ ಪೊಲೀಸ್ ವಾಹನ ಪಲ್ಟಿ ಹೊಡೆದ ಘಟನೆ ಅರಿನಾಗನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಪೇದೆಗಳಾದ ಮಂಜುನಾಥ್ ಮತ್ತು ವೇಣು ಎಂಬವರಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಚಾಲಕ ಸೇರಿ 5 ಮಂದಿ ಪೇದೆಗಳು ಜೀಪಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಗೊತ್ತಾಗಿದೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕೋಲಾರ