ಆರೋಗ್ಯ / HEALTH

ಮನೆ ಬಿಟ್ಟು ಹೊರಗಡೆ ಬಂದ್ರೆ ಅಷ್ಟೆ..

Published

on

ಹುಬ್ಬಳ್ಳಿ: ಕೊರೊನಾ ಸೊಂಕು ಧೃಡಪಟ್ಟಿರುವ ಹುಬ್ಬಳ್ಳಿಯ ತೊರವಿಹಕ್ಕಲದ ಮುಲ್ಲಾಓಣಿ ಜಿಲ್ಲಾಡಳಿತ ರಾತ್ರಿ ವೇಳೆಯೂ ಕೂಡ ಕಟ್ಟೆಚ್ಚರ ವಹಿಸಿದೆ. ಸಾರ್ವಜನಿಕರು ಹೊರಗಡೆ ಬಾರದಂತೆ ಜಿಲ್ಲಾಡಳಿತ ಮೈಕ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದೆ.
ಸೋಂಕು ಪತ್ತೆಯಾದ ವ್ಯಕ್ತಿಯ ಪ್ರದೇಶದ ಸುತ್ತ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ ಮಾಡಿದೆ.
ಅವರ ನಿವಾಸ ಸುತ್ತಮುತ್ತಲಿನ ಸ್ಥಳವನ್ನು ಕಟೇನ್ಮೆಂಟ್ ಪ್ರದೇಶವಾಗಿ ಮಾರ್ಪಡಿಸಲಾಗಿದೆ. ಮನೆ ಬಿಟ್ಟು ಹೊರಗಡೆ ಓಡಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವದು ಎಂದು ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹಮಹ್ಮದ್ ಜುಬೇರ್ ತಹಶೀಲ್ದಾರ ಶಶಿಧರ ಮಾಡ್ಯಾಳ ಹಾಗೂ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಇದ್ದರು.

ರಾಜು ಮುದ್ಗಾಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version