Connect with us

ತುಮಕೂರು

ಬಿರಿಯಾನಿ ತಿನ್ನಿಸಿದ್ದ ಜಯರಾಂನ ಬೆಂಬಲಿಗರಿಗೆ `ಮಸಾಲೆ ಅರೆದ ಖಾಕಿ’

Published

on

ತುಮಕೂರು : ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂನ ಬೆಂಬಲಿಗರಾದ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅAದ ಹಾಗೇ ಮಸಾಲೆ ಜಯರಾಂ ಜನ್ಮದಿನ ಕಾರ್ಯಕ್ರಮ ಆಯೋಜಿಸಿದ್ದ ಇಡಗೂರು ರವಿ,ರಾಜೇನಹಳ್ಳಿ ವಸಂತ ಕುಮಾರ್ ಹಾಗೂ ಹೊನ್ನೆಗೌಡ ಹಾಗೂ ಇತರರ ವಿರುದ್ಧ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಇಡಗೂರು ಗ್ರಾಮದಲ್ಲಿ ತುರುವೇಕೆರೆ ಶಾಸಕ ಮಸಾಲೆ ಜಯರಾಂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು.
ಆದರೆ ಹುಟ್ಟು ಹಬ್ಬದ ಆಚರಣೆ ವೇಳೆ ಶಾಸಕರು ಲಾಕ್ ಡೌನ್ ಉಲ್ಲಂಘನೆ ಮಾಡಿದ್ದರು. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಇಡಗೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಮಾತ್ರವಲ್ಲದೆ, ಬಂದವರಿಗೆಲ್ಲಾ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದ ಶಾಸಕರ ಕಾರ್ಯವೈಖರಿಗೆ ಜನ ಛೀ..ಥೂ ಎಂದು ಉಗಿದಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Continue Reading
Click to comment

Leave a Reply

Your email address will not be published. Required fields are marked *

ತುಮಕೂರು

ತುಮಕೂರಿನ ಮಧುಗಿರಿಯಲ್ಲಿ ಚಿರತೆ ದಾಳಿ-ಭಯದಲ್ಲೇ ದಿನದೂಡುತ್ತಿರುವ ಸಿಬ್ಬಂದಿ..!

Published

on

By

ತುಮಕೂರಿನ ಮಧುಗಿರಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಸಮೀಪ ಹಾಡುಹಗಲೇ ಚಿರತೆ ದಾಳಿ ನಡೆಸಿದ್ದು, ಕಳೆದ 3 ದಿನಗಳಿಂದ ಇಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಇನ್ನೂ ಚಿರತೆ ಹಂದಿ, ನಾಯಿ, ಮೇಕೆಗಳನ್ನು ಹೊತ್ತೊಯ್ದಿದೆ. ಇನ್ನು ಚಿರತೆ ಭಯದಿಂದ ಬೈಯೋಮೇಟ್ರಿಕ್ ಸಹಿ ಮಾಡಲು ಇಲ್ಲಿನ ಸಿಬ್ಬಂದಿ ಭಯ ಪಡುತ್ತಿದ್ದು, ಇಲ್ಲಿನ ಸಿಬ್ಬಂದಿಗಳು ಪ್ರತಿ ದಿನ ಭಯದ ವಾತಾವರಣದಲ್ಲಿಯೇ ವಿದ್ಯಾರ್ಥಿ ನಿಲಯಕ್ಕೆ ಹಾಜರಾಗುತ್ತಿದ್ದಾರೆ. ಇನ್ನೂ ಈ ಸಂಬಂಧ ಅರಣ್ಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದರು ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ- ದೇವರಾಜ್ ಕೆ.ಎನ್. ಎಕ್ಸ್ ಪ್ರೆಸ್ ಟಿವಿ ಕೊರಟಗೆರೆ

Continue Reading

ತುಮಕೂರು

ಹೊಸ ವರ್ಷಕ್ಕೆ ಬಂಪರ್ ಕೊಡುಗೆಯ ಭರವಸೆ ನೀಡಿದ ಶಾಸಕ ಡಾ.ಜಿ ಪರಮೇಶ್ವರ್..!

Published

on

By

ಕೊರಟಗೆರೆ: ಹೊಸ ವರ್ಷಕ್ಕೆ ಶಾಸಕ ಡಾ.ಜಿ ಪರಮೇಶ್ವರ್ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಜನತೆಗೆ ಬಂಪರ್ ಕೊಡುಗೆಯ ಭರವಸೆ ನೀಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾತನಾಡಿ, ಹೊಸವರ್ಷದ ಆರಂಭದಲ್ಲಿ ಕೊರೋನಾ ರೋಗ ಕಡಿಮೆಯಾಗುತ್ತಿದೆ. ಸಾರ್ವಜನಿಕರು ಮತ್ತಷ್ಟು ಜಾಗ್ರತೆ ಮತ್ತು ನಿಯಮ ಪಾಲಿಸಿದರೆ ಕೊರೊನಾ ರೋಗವನ್ನು ಸಮಾಜದಿಂದ ಮುಕ್ತಗೊಳಿಸಬಹುದು ಎಂದರು.ಇನ್ನೂ ಮುಂಬರುವ ದಿನಗಳಲ್ಲಿ ತುಮಕೂರು ಸಿದ್ದಾರ್ಥ ಮಹಾ ವೈದ್ಯಕೀಯ ಆಸ್ಪತ್ರೆಯಿಂದ ಕೊರಟಗೆರೆ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಕೊರಟಗೆರೆ ಪಟ್ಟಣ ಸೇರಿದಂತೆ 6 ಹೋಬಳಿ ಕೇಂದ್ರಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಈ ಬಸ್ಸಿನಲ್ಲಿ ಕ್ಷೇತ್ರದ ವಿವಿಧ ಆರೋಗ್ಯ ಸಮಸ್ಯೆಯ ಜನರು ಅಸ್ಪತ್ರೆಯಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಪಡೆಯಬಹುದು. ಉಳಿದ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆಗಳನ್ನು ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಶುಶ್ರೂಷೆಗಳನ್ನು ರಿಯಾಯಿತಿ ವೆಚ್ಚದಲ್ಲಿ ಮಾಡಲಾಗುವುದು. ಈ ಎಲ್ಲಾ ಜನಪರ ಸೇವೆಗಳನ್ನು ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತರಲಾಗುವುದು. ಇನ್ನೂ ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದಲೇ ದೇಶಿಯಾ ಕ್ರೀಡೆಗಳಾದ ಕಬಡ್ಡಿ ಸೇರಿದಂತೆ ಇತರೆ ಪಂದ್ಯಗಳನ್ನು ಹೋಬಳಿ ಮಟ್ಟದಲ್ಲಿ ಆಯೋಜಿಸಿ, ಅಲ್ಲಿ ತಂಡಗಳನ್ನು ಆರಿಸಿ, ಅವುಗಳನ್ನು ತಾಲ್ಲೂಕು ಮಟ್ಟದಲ್ಲಿ ಪ್ರದರ್ಶಿಸಲಾಗುವುದು. ಹೊರಭಾಗದಿಂದಲೂ ಸಹ ನೈಪುಣ್ಯತೆ ಹೊಂದಿರುವ ತಂಡಗಳನ್ನು ಕರೆಸಿ ಕ್ಷೇತ್ರದ ಯುವಜನತೆಗೆ ತರಭೇತಿ ನೀಡುವ ಕಾರ್ಯವನ್ನು ಮಾಡಲಾಗುವುದು. ಮುಂಬರುವ ದಿನಗಳಲ್ಲಿ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತದೆ.ಯುವಕರಿಗೆ ಮತ್ತು ಜನರಿಗೆ ಕ್ರೀಡೆ,ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜನಪರ ಕೆಲಸಗಳ ಬಗ್ಗೆ ಅರಿವು ಮೂಡಿಸುವ ಕೆಲಸಗಳನ್ನು ಮಾಡಲಾಗುವುದು. ಈ ಎಲ್ಲಾ ಕೆಲಸಗಳನ್ನು ಕಾಂಗ್ರೆಸ್ ಪಕ್ಷದ ಯುವಕರು,ಮಹಿಳೆಯರು ಮತ್ತು ಕಾರ್ಯಕರ್ತರೊಂದಿಗೆ ಆಯೋಜಿಸಲಾಗುವುದು. ಹೊಸ ವರ್ಷವೂ ಪ್ರತಿಯೊಬ್ಬರಿಗೂ ಒಳ್ಳೆಯದನ್ನು ಮಾಡಿ ಮುಂಬರುವ ದಿನಗಳಲ್ಲಿ ಸಾಂಕ್ರಾಮಿಕ ರೋಗ ಮುಕ್ತವಾಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದರು. ಇನ್ನೂ ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೋಡ್ಲಹಳ್ಳಿ ಅಶ್ವತ್ಥನಾರಾಯಣ,ಅರಕೆರೆ ಶಂಕರ್,ಕೆಪಿಸಿಸಿ ಕಾರ್ಯದರ್ಶಿ ಬಿ.ಎಸ್ ದಿನೇಶ್,ಜಿಲ್ಲಾ ಯಾದವ ಜನಾಂಗದ ಅಧ್ಯಕ್ಷ ಚಂದ್ರಶೇಖರಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ಕುಮಾರ್,ಪ.ಪಂ ಸದಸ್ಯ ಕೆ.ಆರ್ ಓಬಳರಾಜು, ಗ್ರಾ.ಪಂ ಸದಸ್ಯ ಕೆಎಲ್ಎಂ ಮಂಜು, ಮುಖಂಡರುಗಳಾದ ಎಲ್ ರಾಜಣ್ಣ ಚಿಕ್ಕರಂಗಯ್ಯ, ರವಿಕುಮಾರ್, ಅರವಿಂದ್,ಗೋಪಿನಾಥ್,ಅನಂತಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

ವರದಿ-ದೇವರಾಜ್ ಎಕ್ಸ್ ಪ್ರೆಸ್ ಟಿವಿ ಕೊರಟಗೆರೆ

Continue Reading

ತುಮಕೂರು

ತುಮಕೂರಿನಲ್ಲಿ ಬ್ರಿಟನ್ ನಿಂದ ವಾಪಾಸ್ಸಾದ ಐವರು ಪತ್ತೆ-ವರದಿ ನೆಗೆಟಿವ್,ನಿಟ್ಟುಸಿರು ಬಿಟ್ಟ ತುಮಕೂರು ಮಂದಿ..!

Published

on

By

ತುಮಕೂರು: ಕೋವಿಡ್ ರೂಪಾಂತರಗೊಂಡ ಸೋಂಕು ಭಾರತದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಜನರಲ್ಲಿ ಆತಂಕ ಮೂಡಿತ್ತು.ಎಲ್ಲಾ ರಾಜ್ಯಗಳಲ್ಲಿ ಹೈ-ಅಲರ್ಟ್ ಕೂಡ ಘೋಷಣೆ ಮಾಡಿದ್ರು. ಅದರಂತೆ ಬೆಂಗಳೂರು ಸೇರಿದಂತೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಬ್ರಿಟನ್ನಿಂದ ಬಂದ ಪ್ರಯಾಣಿಕರನ್ನು ಪತ್ತೆಹಚ್ಚಲಾಗುತ್ತಿದೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಈವರೆಗೆ ಐವರು ಬ್ರಿಟನ್ನಿಂದ ಬಂದಿದ್ದು, ನಿನ್ನೆ ಅವರಿಗೆ ಆರ್ಟಿ-ಪಿಸಿಆರ್ ಪರೀಕ್ಷೆ ಒಳಪಡಿಸಲಾಯಿತು.ಇಂದು ಅವರ ವರದಿ ಬಂದಿದ್ದು, ಐವರಿಗೂ ಕೊರೊನಾ ನೆಗೆಟಿವ್ ಬಂದಿದೆ ಎಂದು ಡಿಹೆಚ್ಒ ನಾಗೇಂದ್ರಪ್ಪ ತಿಳಿಸಿದ್ದಾರೆ.ಸದ್ಯ ಐವರು ಬ್ರಿಟನ್ ಪ್ರಯಾಣಿಕರನ್ನು ಹೋಂ ಕ್ವಾರೆಂಟೈನ್ ಮಾಡಲಾಗಿದ್ದು, ಅವರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ ಎನ್ನಲಾಗಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelerCracked AccountsNetflix Cookiewarez hack forum scripts illegal onlyfans +18 porn Hacker Sextürbanlı escortadanaescortbi.sitesiyah bayrak ayna amirdeneme bonusu veren sitelerDeneme bonusu veren sitelerDeneme bonusuadana escortadıyaman escortağrı escortaksaray escortamasya escortankara escortantalya escortardahan escortartvin escortaydın escortbalıkesir escortbartın escortbatman escortbayburt escortbilecik escortbingöl escortbitlis escortbolu escortburdur escortbursa escortçanakkale escortçankırı escortçorum escortdenizli escortdiyarbakır escortdüzce escortedirne escortelazığ escorterzincan escorterzurum escorteskisehir escortgaziantep escortgiresun escortgümüşhane escorthakkari escorthatay escortığdır escortisparta escortizmir escortkarabük escortkaraman escortkars escortkastamonu escortkayseri escortkilis escortkırklareli escortkırşehir escortkocaeli escortkonya escortkütahya escortmalatya escortmanisa escortmaras escortmardin escortmersin escortmuğla escortnevşehir escortordu escortosmaniye escortrize escortsakarya escortsamsun escortsiirt escortsinop escortşırnak escortsivas escorttekirdağ escorttokat escorttrabzon escorttunceli escorturfa escortvan escortyalova escortyozgat escortzonguldak escort