Connect with us

ಗುಲಬರ್ಗಾ

ಲಾಕ್ ಡೌನ್ ಉಲ್ಲಂಘಿಸಿದ 118 ಮಂದಿ ವಿರುದ್ಧ ರೌಡಿ ಶೀಟ್ ಓಪನ್

Published

on

ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸದ್ಯ ಆರಂಭದಿAದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಜಿಲ್ಲೆಯ ೧೧೮ ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು ೩೮ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.ಈ ಪ್ರಕರಣಗಳಿಗೆ ಸಂಬAಧಿಸಿದAತೆ ೧೨೨ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನೂ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ೬೫೯ ವಾಹನಗಳನ್ನು ವಶಕ್ಕೆ ಪಡೆದು ೯೨೭೦೦ ರೂ.ದಂಡ ಸಹ ವಿಧಿಸಲಾಗಿದೆ ಎಂದು ಎಸ್.ಪಿ.ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇಂದು ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading
Click to comment

Leave a Reply

Your email address will not be published. Required fields are marked *

ಗುಲಬರ್ಗಾ

ಉಪ ಪ್ರಾದೇಶಿಕ ಉದ್ಯೋಗಾಧಿಕಾರಿಯಾಗಿ ದಿವಾಕರ್ ಅಧಿಕಾರ ಸ್ವೀಕಾರ..!

Published

on

By

ಶಹಾಪುರ :ಶ್ರಮಪಟ್ಟರೆ ಯಾರು ಬೇಕಾದರೂ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬುದನ್ನು ಶಿವಶಾಂತವೀರ ದಿವಾಕರ್ ಸಾಬೀತುಪಡಿಸಿ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸಾಗಿ ಕೇಂದ್ರ ಸರ್ಕಾರದ(government of india national career service centre bangalore) ಉಪ ಪ್ರಾದೇಶಿಕ ಉದ್ಯೋಗ ಅಧಿಕಾರಿಯಾಗಿ ಇಂದು ಬೆಂಗಳೂರಿನಲ್ಲಿ (sub regional employment officer ) ಅಧಿಕಾರ ಸ್ವೀಕರಿಸಿದರು. 2017 ರಲ್ಲಿ ಭಾರತ ಯುಪಿಎಸ್ಸಿ ಪರೀಕ್ಷೆಗೆ ಒಟ್ಟು 8 ಹುದ್ದೆಗಳಿಗೆ ಅರ್ಜಿ ಕರೆಯಲಾಗಿತ್ತು. ಆ 8 ಹುದ್ದೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾದ ಶಿವಶಾಂತವೀರ ದಿವಾಕರ್.ಈ ಹಿಂದೆ ಅರುಣಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸಿ ಇಂದು ಕರ್ನಾಟಕಕ್ಕೆ ವರ್ಗಾವಣೆಗೊಂಡು (ministry of labour and employment directorate general of employment Bangalore ) ಕಾರ್ಯನಿರ್ವಹಿಸುತ್ತಿದ್ದಾರೆ.ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ಬಡ ಕುಟುಂಬದಲ್ಲಿ ಜನಿಸಿ ಕಠಿಣ ಪರಿಶ್ರಮದಿಂದ ವಿಧ್ಯಾಭ್ಯಾಸ ಮಾಡಿದ್ದರು. ಶಿವಶಾಂತವೀರ ದಿವಾಕರ್ ಅವರ 4 ನೇ ಹುದ್ದೆ ಇದಾಗಿದ್ದು, ತಂದೆಯ ಆಸೆಯಂತೆ ಯುಪಿಎಸ್ ಸಿ. ಪರೀಕ್ಷೆ ಬರೆದು ಅಧಿಕಾರಿ ಆಗಬೇಕೆಂಬ ಕನಸನ್ನು ಇಂದು ನನಸು ಮಾಡಿದ್ದಾರೆ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಠ ಬಿಡದೆ ಹಗಲು ಇರುಳೇನ್ನದೆ ಸತತ ಅಭ್ಯಾಸ ಮಾಡಿ ತಮ್ಮ ಗುರಿ ತಲುಪಿ ಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಶಿವಶಾಂತವೀರ ದಿವಾಕರ್ ಅವರು ಬಹಳ ಸೂಕ್ಷ್ಮ ಹಾಗೂ ಸಂವೇದನಾ ಶೀಲ ಮೃದು ಮನಸ್ಸಿನ ಸ್ನೇಹಜೀವಿಯೂ ಕೂಡ ಹೌದು ಗುರಿ ಸಾಧಿಸುವ ವಿದ್ಯಾರ್ಥಿಗಳಿಗೆ ಇವರು ಸ್ಫೂರ್ತಿಯಾಗಿದ್ದಾರೆ.ಸ್ನೇಹಿತನ ಸಾಧನೆಗೆ ಈ ಸಂದರ್ಭದಲ್ಲಿ ಸಾಹಿತಿ ಹಾಗೂ ಪತ್ರಕರ್ತ ಬಸವರಾಜ ಸಿನ್ನೂರ ಹಾಗೂ ಅಕ್ಬರ್ ಹೊಟಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ‌ ಶಹಾಪುರ.

Continue Reading

ಆರೋಗ್ಯ / HEALTH

ತಾಲೂಕು ಕೇಂದ್ರಗಳಲ್ಲೇ ಇನ್ನೂ ಮುಂದೆ ಡಿಸಿ,ಎಸ್ಪಿಗಳ ವಾಸ

Published

on

ಬೆಂಗಳೂರು: ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ಆ ತಾಲ್ಲೂಕು ಕೇಂದ್ರಗಳಲ್ಲಿಯೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಅಂದ ಹಾಗೇ ಬೆಂಗಳೂರಿನಲ್ಲಿAದು ಕೋವಿಡ್ ೧೯ ನಿಯಂತ್ರಣಕ್ಕೆ ಸಂಬAಧ ವಿಜಯಪುರ, ಯಾದಗಿರಿ,ಉಡುಪಿ, ಕಲಬುರ್ಗಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಸಿಎಂ,ಕೋವಿಡ್ ೧೯ ಪರೀಕ್ಷಾ ಕಿಟ್‌ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು.ಪೋಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಬೇಕಲ್ಲದೆ. ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಇವರ ಬಗ್ಗೆ ನಿಗಾ ವಹಿಸಬೇಕು. ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ ನೀಡಲಾಗಿದ್ದು, ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಲ್ಲದೆ, ಪ್ರತಿ ಗ್ರಾಮ ಹಾಗೂನಗರಗಳಲ್ಲಿ ವಾರ್ಡ್ ಮಟ್ಟದಲ್ಲಿ ಕಾವಲು ಸಮಿತಿಗಳನ್ನು ರಚಿಸಬೇಕಲ್ಲದೆ,ಈ ಸಮಿತಿಗಳು ಕ್ರಿಯಾಶೀಲ ವಾಗಿದ್ದು,ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು.
ಇನ್ನು ತಾಲ್ಲೂಕು ಕೇಂದ್ರಗಳಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದ ಸಿಎಂ ಜೂ.೮ರಿಂದ ಸಡಲಿಕೆಗಳನ್ನು ಮಾಡುತ್ತಿರುವುದರಿಂದ ಕಟ್ಟೆಚ್ಚರ ವಹಿಸಿ,ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಮಹಾರಾಷ್ಟ್ರ ದಿಂದ ಆಗಮಿಸುತ್ತಿರುವ ವಲಸಿಗರಿಂದಕೋವಿಡ್-೧೯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು,ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಇದೇ ವೇಳೆ ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು,ಅಕ್ರಮ ಪ್ರವೇಶವನ್ನು ತಡೆಯಬೇಕು.ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.
ಪಿ.ಯು.ಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು,ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಸೂಚಿಸಿದರು.
ವೀಡಿಯೋ ಸಂವಾದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

ಆರೋಗ್ಯ / HEALTH

ಕ್ವಾರೈಂಟೈನ್‌ನಲ್ಲಿರುವವರಿಗೆ ದಿನ ಬಳಕೆ ವಸ್ತು ವಿತರಣೆ

Published

on

ಅಫಜಲಪುರ(ಕಲಬುರಗಿ): ಅಫಜಲಪುರ ಶಾಸಕರ ಅಭಿಮಾನಿಯಿಂದ ಕ್ವಾರೈಂಟೈನ್‌ನಲ್ಲಿರುವವರಿಗೆ ದಿನಬಳಕೆಯ ವಸ್ತುಗಳ ಜೊತೆಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು,
ಅಂದ ಹಾಗೇ ಅಫಜಲಪುರ ತಾಲ್ಲೂಕಿನ ಶಾಸಕ ಎಂ.ವೈ.ಪಾಟೀಲ್ ಅವರ ಅಭಿಮಾನಿ ಉಡಚಾಣ ಹಟ್ಟಿ ಗ್ರಾಮದ ದತ್ತು ಬಂಡಗಾರ ಕ್ವಾರೈಂಟೈನ್‌ನಲ್ಲಿರುವ ಜನರಿಗೆ ದಿನಬಳಕೆಯ ಅಗತ್ಯ ವಸ್ತುಗಳು ಮತ್ತು ಊಟ ಹಾಗೂ ಉಪಹಾರದ ಸಾಮಗ್ರಿಗಳು ತರಕಾರಿ ಜೊತೆಗೆ ಮಕ್ಕಳಿಗೆ ಬಿಸ್ಕೇಟ್ ನೀಡಿ ಮಾನವೀಯತೆ ಮೆರೆದಿದ್ದಾರೆ.
ವಿತರಣೆಯ ಸಮಯದಲ್ಲಿ ಶಾಸಕರ ಮಗನಾದ ಡಾ.ಸಂಜಯ ಕುಮಾರ ಪಾಟೀಲ್ ಮಾತನಾಡಿ, ಜನರು ಕೊರೊನಾಗೆ ಹೆದರುವ ಅವಶ್ಯಕತೆ ಇಲ್ಲ.ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಿಕೊಂಡು ಹೋಗಿ, ಊರಿನ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದತ್ತು ಬಂಡಗಾರ ಅವರ ನೇತೃತ್ವದಲ್ಲಿ ಸದಾ ಸನ್ನದ್ಧರಾಗಿದ್ದಾರೆ.ಅಲ್ಲದೆ,ತಾಲ್ಲೂಕಿನ ಅಭಿವೃದ್ಧಿಗೆ ಎಂ.ಯೈ.ಪಾಟೀಲ್ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡರಾದ ಮಹಾದೇವಗೌಡ ಕರೂಟಿ ಮತ್ತು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ ಜಮಾದಾರ್ ಉಪಸ್ಥಿತರಿದ್ದರು.

ಈರಣ್ಷ ಎಂ.ವಗ್ಗೆ ಎಕ್ಸ್ ಪ್ರೆಸ್ ಟಿವಿ ಅಫಜಲಪುರ(ಕಲಬುರಗಿ)

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelerdenizli escort bayanadana escortCracked AccountsNetflix Cookiewarez hack forum scripts illegal onlyfans +18 porn Hacker Sextürbanlı escortadanaescortbi.sitesiyah bayrak ayna amiradana escortadıyaman escortağrı escortaksaray escortamasya escortankara escortantalya escortardahan escortartvin escortaydın escortbalıkesir escortbartın escortbatman escortbayburt escortbilecik escortbingöl escortbitlis escortbolu escortburdur escortbursa escortçanakkale escortçankırı escortçorum escortdenizli escortdiyarbakır escortdüzce escortedirne escortelazığ escorterzincan escorterzurum escorteskisehir escortgaziantep escortgiresun escortgümüşhane escorthakkari escorthatay escortığdır escortisparta escortizmir escortkarabük escortkaraman escortkars escortkastamonu escortkayseri escortkilis escortkırklareli escortkırşehir escortkocaeli escortkonya escortkütahya escortmalatya escortmanisa escortmaras escortmardin escortmersin escortmuğla escortnevşehir escortordu escortosmaniye escortrize escortsakarya escortsamsun escortsiirt escortsinop escortşırnak escortsivas escorttekirdağ escorttokat escorttrabzon escorttunceli escorturfa escortvan escortyalova escortyozgat escortzonguldak escort