Connect with us

ದೇಶ - ವಿದೇಶ

ಪಾದರಾಯನಪುರ ಗಲಭೆ,ಮಹಿಳಾ ರೌಡಿ ಸೇರಿ ಇತರರ ವಿರುದ್ಧ ಎಫ್‌ಐಆರ್

Published

on

ಬೆಂಗಳೂರು:ಬೆAಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬAಧಿಸಿದAತೆ ಜೆ ಜೆ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಮುಖ ಆರೋಪಿಗಳಾದ ವಾಜಿದ್, ಇರ್ಫಾನ್ ಖಾನ್, ಹೌಲಿ ಬಾಬ್, ಕಬಿರ್, ಜಕ್ರಿಯಾ ಅಹಮ್ಮದ್, ಫರೋಜಾ ಖಾನ್ ಎಂಬುವರ ಕುಮ್ಮಕ್ಕಿನಿಂದ ಗಲಾಟೆಯಾಗಿದ್ದು,ಪೊಲೀಸರು ಪ್ರಮುಖ ಆರೋಪಿಗಳ ಹೆಸರನ್ನ ಉಲ್ಲೇಖಿಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿ ದ್ದಾರೆ. ಸದ್ಯ ಆರೋಪಿಗಳನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋಗಿ ಘಟನೆಗಳ ಬಗ್ಗೆ ಸಂಪೂರ್ಣ ವಿವರಗಳನ್ನು ಡಿಸಿಪಿ ಅನುಚೇತ್ ನೇತೃತ್ವದ ತಂಡ ಪಡೆಯಲಿದೆ.
ಈಗಾಗಲೇ ಪೊಲೀಸರು ಐಪಿಸಿ ೧೮೮, ೩೫೩, ಎನ್‌ಡಿಎಮ್‌ಎ ಕಾಯ್ದೆ ೫೧,೫೨, ೫೪ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇಷ್ಟು ಸೆಕ್ಷನ್‌ಗಳಡಿ ಸದ್ಯ ಕೇಸ್ ಹಾಕಿದ್ದು ಪ್ರಮುಖ ಆರೋಪಿಗಳು ಸೇರಿ ಒಟ್ಟು ೫೪ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದಕ್ಕು ಮುನ್ನ ಪೊಲೀಸರು ಬೆಂಗಳೂರಿನ ಪಾದರಾಯನಪುರದ ಗುಡ್ಡದಹಳ್ಳಿಯಲ್ಲಿ ಭಾನುವಾರ ರಾತ್ರಿ ಬಿಬಿಬಿಎಂಪಿ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ಮಹಿಳಾ ರೌಡಿ ಸೇರಿ ೫೪ ಮಂದಿಯನ್ನು ಬಂಧಿಸಿದ್ದರು.
ಅAದ ಹಾಗೇ ಕ್ವಾರಂಟೈನ್‌ಗೆ ಒಪ್ಪದ ಶಂಕಿತರು ಹಾಗೂ ಅವರ ಕಡೆಯವರು, ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದರು. ರಸ್ತೆಗೆ ಅಡ್ಡವಾಗಿ ಹಾಕಿದ್ದ ತಗಡು, ಬ್ಯಾರಿಕೇಡ್ ಕಿತ್ತು ಹಾಕಿದ್ದರು. ಸ್ಥಳದಲ್ಲಿದ್ದ ಪೆಂಡಾಲ್ ಧ್ವಂಸ ಮಾಡಿದ್ದರು.
ಇನ್ನು ರಾತ್ರಿಯೇ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದರು. ಘಟನೆ ಸಂಬAಧ ಜಗಜೀವನರಾಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆ ಸಂಬAಧ ಮಹಿಳಾ ರೌಡಿ ಫಿರೋಜಾ ಅಲಿಯಾಸ್ ಫರೋಜಾ ಸೇರಿ ೫೪ ಮಂದಿಯನ್ನು ಬಂಧಿಸಲಾಗಿದೆ. ಫಿರೋಜಾ, ಸ್ಥಳೀಯವಾಗಿ ಗಾಂಜಾ ಮಾರುತ್ತಿದ್ದಳು. ಆಕೆಯೇ ಸಂಚು ರೂಪಿಸಿ ಗಲಾಟೆ ಮಾಡಿಸಿದ್ದಾಳೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಲಿಂಗಸುಗೂರು ಕೆನರಾ ಬ್ಯಾಂಕ್ ಸೀಲ್‌ಡೌನ್..

Published

on

ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್‌ನ ಸೀಲ್‌ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ.
ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ ಪ್ರಾಥಮಿಕ ಸಂಪರ್ಕವನ್ನು ಬ್ಯಾಂಕ್ ಸಿಬ್ಬಂದಿ ಹೊಂದಿದ್ದು, ಪರಿಣಾಮ ನಾಲ್ಕು ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಿ, ಬ್ಯಾಂಕ್‌ನ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಇನ್ನು ಕೇರಳ ಸೋಂಕಿತ ಮತ್ತು ಸರ್ಜಾಪುರ ಯುವಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಇವರಿಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯನ್ನೂ ಕ್ವಾರಂಟೈನ್ ಮಾಡಿ ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ.
ಇದೇ ವೇಳೆ ಸಾರ್ವಜನಿಕ ಆಸ್ಪತ್ರೆಗೆ ನಿತ್ಯ ೪೦೦ ರಿಂದ ೫೦೦ ಹೊರ ರೋಗಿಗಳು ಬರುತ್ತಿದ್ದರು. ಇದೀಗ ತುರ್ತು ಚಿಕಿತ್ಸೆ ಹೊರತು ಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ ಸೇವೆ ನಿಲ್ಲಿಸಿರುವುದರಿಂದ ಗ್ರಾಹಕರು, ರೋಗಿಗಳು ಪರದಾಡುತ್ತಿದ್ದಾರೆ.

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು(ರಾಯಚೂರು)

Continue Reading

ಆರೋಗ್ಯ / HEALTH

ಧಾರವಾಡದಲ್ಲಿ ಎರಡು ಕೊರೊನಾ ಕೇಸ್

Published

on

ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್‌ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.ಸಾAಸ್ಥಿಕ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೫೦ಕ್ಕೆ ಏರಿಕೆಯಾಗಿದೆ.ಈಗಾಗಲೇ ೨೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Continue Reading

ಆರೋಗ್ಯ / HEALTH

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ..

Published

on

ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು,ಲಾಕ್‌ಡೌನ್‌ನಿಂದ ಬೀದಿ ಬದಿ ವ್ಯಾಪಾರಸ್ಥರು ಆರ್ಥಿಕ ಮುಗ್ಗಟ್ಟಿನಿಂದ ಕಷ್ಟಪಡುತ್ತಿದ್ದಾರೆ.ಜೀವನೋಪಾಯಕ್ಕೆ ಅನ್ಯ ಮಾರ್ಗವಿಲ್ಲದೆ ಖಾಸಗಿ ಲೇವಾದೇವಿ ಸಂಸ್ಥೆಯ ಶೋಷಣೆಗೆ ಒಳಗಾಗುತ್ತಿರುವುದನ್ನು ಅರಿತು ಬ್ಯಾಂಕ್ ಆಡಳಿತ ಮಂಡಳಿ ಈ ವ್ಯಾಪಾರಸ್ಥರಿಗೆ ಸಾಲ ನೀಡಲು ತೀರ್ಮಾನ ಕೈಗೊಂಡಿದೆ ಎಂದರು.
ಯಾವುದೇ ರೀತಿಯ ಆಧಾರ ಇಲ್ಲದೇ ಬಡವರ ಬಂಧು ಯೋಜನೆಯಡಿ ಸಾಲ ನೀಡಲಾಗುವುದು.ಜಿಲ್ಲೆಯ ೧೦ತಾಲ್ಲೂಕುಗಳನಿರ್ದೇಶಕರು ತಮ್ಮ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ತಾವುಗಳೇ ಸಾಲದ ಚೆಕ್ ವಿತರಿಸಬಹುದು.ಇದಕ್ಕೆ ಅಧ್ಯಕ್ಷರನ್ನು ಕಾಯುವ ಅಗತ್ಯವಿಲ್ಲ ಎಂದು ಹೇಳಿದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು,ತಾಲ್ಲೂಕು ಮೇಲ್ವಿಚಾರಕರು ಮತ್ತಿತರ ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis