ಜನಸ್ಪಂದನ

ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ

Published

on

ದೇವದುರ್ಗ(ರಾಯಚೂರು): ಕೊರೋನಾ ಮಹಾಮಾರಿ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಇದೀಗ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ.
ಅAದ ಹಾಗೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯಿಸಿ ಜಾಲಹಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮ ಸಮಿತಿಯಿಂದ ಮನವಿ ಸಲ್ಲಿಸಿ ಒತ್ತಾಯಿಸಿದರು.
ಇನ್ನು ಪ್ರಾಂತ ರೈತ ಸಂಘ ಮುಖಂಡ ಹನುಮಂತ ಮಡಿವಾಳ ಮಾತನಾಡಿ, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿ ಕೆಲಸ ನೀಡಿ ಸರ್ಕಾರ ನಿಗದಿ ಮಾಡಿರುವ ವೇತನ ನೀಡಬೇಕು.ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ಗ್ರಾಮ ಪಂಚಾಯತಿ ಎದುರು ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುರೇಶ ಭವಾನಿ ಎಕ್ ್ಸಪ್ರೆಸ್ ಟಿವಿ ದೇವದುರ್ಗ(ರಾಯಚೂರು)

Click to comment

Trending

Exit mobile version