ಆಳಂದ(ಕಲಬುರಗಿ):ಜಿಲ್ಲೆಯ ಆಳಂದ ತಾಲೂಕಿನ ನಿಂಬಾಳ ಗ್ರಾಮದಲ್ಲಿ ಪೊಲೀಸ್ ಇಲಾಖೆ ವಿವಿಧ ಸಮುದಾಯದ ಮುಖಂಡರ ಸಭೆ ನಡೆಸಿದೆ.
ಅಂದ ಹಾಗೇ ಸಭೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂತಹ ಸಮಯದಲ್ಲಿ ರಂಜಾನ್,ರಥೋತ್ಸವ,ಜಾತ್ರೆ ಆಚರಿಸದಂತೆ ಮಾದನಹಿಪ್ಪರಗಾ ಪಿಎಸ್ಐ ಇಂದು ಮತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಒಂದು ವೇಳೆ ಪೊಲೀಸ್ ಇಲಾಖೆ ಆದೇಶ ಉಲ್ಲಂಘಿಸಿ ಧಾರ್ಮಿಕ ಕಾರ್ಯಕ್ರಮ ನಡೆಸಿದರೇ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಜಕುಮಾರ್ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ(ಕಲಬುರಗಿ)