ಸಿಂಧನೂರು(ರಾಯಚೂರು):ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಬಳಿ ನಡೆದಿದೆ.
ಮಾಟೂರು ಗ್ರಾಮದ ಪರಸಪ್ಪ , ಪತ್ನಿ ಕನಕಮ್ಮ , ಪುತ್ರಿ ನಾಗಮ್ಮ ಮೃತಪಟ್ಟವರಾಗಿದ್ದಾರೆ.
ಸದ್ಯ ಪರಸಪ್ಪನ ಪತ್ನಿ ಗರ್ಭಿಣಿಯಾಗಿದ್ದರಿಂದ ಆರೋಗ್ಯ ತಪಾಸಣೆಗಾಗಿ ಮಗಳೊಂದಿಗೆ ತೆರಳುತ್ತಿದ್ದ. ಈ ವೇಳೆ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಇನ್ನು ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದು,ಈ ಸಂಬAಧ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಸಿಂಧನೂರು