Connect with us

ಆರೋಗ್ಯ / HEALTH

ಬಾಂಬೆಯಿ0ದ ಕೊರೊನಾ ಸೋಂಕಿತ ಸಾತೇನಹಳ್ಳಿಗೆ ಬಂದ ಬಗ್ಗೆ ತನಿಖೆ

Published

on

ನಾಗಮಂಗಲ(ಮ0ಡ್ಯ): ದಿಲ್ಲಿಯ ನಿಜಾಮುದ್ದೀನ್ ತಘ್ಲಿಗಿ ಮತ್ತು ನಂಜನಗೂಡಿನ ಜ್ಯೂಬಿಲಿಯಂಟ್ ಸಂಪರ್ಕದಿ0ದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಬಾಂಬೆ ನಂಟಿನಿ0ದ ಗ್ರಾಮಕ್ಕೂ ಅಂಟಿದ ಸಾತೇನಹಳ್ಳಿಗೆ ಶಾಸಕ ಸುರೇಶ್ ಗೌಡ್ರು ಮತ್ತು ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡರು ಭೇಟಿ ನೀಡುವ ಮೂಲಕ ಅಧಿಕಾರಿ ವರ್ಗ ಕೈಗೊಂಡಿರುವ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಅಂದ ಹಾಗೇ ಕೊರೊನಾ ಸೋಂಕಿತ ವ್ಯಕ್ತಿಯ ಪತ್ನಿ ಮತ್ತು ಬಾಮೈದುನನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಯಾವುದೇ ರೀತಿಯಿಂದಲೂ ಭಯ ಪಡದಂತೆ ಶೀಘ್ರವೇ ಸಂಬ0ಧಿ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖವಾಗಿ ಹಿಂದಿರುಗುವ ಭರವಸೆ ನೀಡಿದರು.
ಜೊತೆಗೆ ಗ್ರಾಮಸ್ಥರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಸಮಾಲೋಚನೆ ನಡೆಸಿ ಅಗತ್ಯತೆಗಳ ಪೂರೈಕೆಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮಾತನಾಡಿದ ಶಾಸಕ ಸುರೇಶ್ ಗೌಡ,ಬಾಂಬೆಯಲ್ಲಿ ಕಂಡು ಬಂದಿರುವ ಕೊರೊನಾ ವೈರಸ್ ತುಂಬಾ ಅಪಾಯಕಾರಿಯಾಗಿದೆ.
ಈ ನಡುವೆಯೂ ಬಾಂಬೆಯಿ0ದ ಇಲ್ಲಿಯವರೆಗೆ ಬಂದಿರುವ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.ಅಲ್ಲದೆ ಹೊರ ರಾಜ್ಯಗಳಿಂದ ತಾಲ್ಲೂಕಿಗೆ ಆಗಮಿಸಿರುವ ೬೭೫ ಜನಗಳ ಪೈಕಿ ಬಾಂಬೆಯಿ0ದಲೇ ೬೦೦ ಜನ ಬಂದಿದ್ದಾರೆ. ಇವರಿಗೆಲ್ಲಾ ಕೊರೊನಾ ಪರೀಕ್ಷೆ ತ್ವರಿತ ಗತಿಯಲ್ಲಿ ಆಗಬೇಕಿದೆ. ಈ ಪ್ರಕರಣದಿಂದ ನಿಷೇಧಿತ ಪ್ರದೇಶವಾಗಿ ಸೀಲ್ ಮಾಡಲಾಗಿರುವ ಈ ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದ0ತೆ ಕ್ರಮ ವಹಿಸಲು ಸೂಚಿಸಲಾಗಿದೆ. ಸ್ಥಳೀಯರು ಆತಂಕಪಡದೆ ಎಚ್ಚರವಹಿಸುವ ಮೂಲಕ ಸಹಕರಿಸಬೇಕು ಎಂದರು.
ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ,ಲಾಕ್ ಡೌನ್ ಹಿನ್ನಲೆಯಲ್ಲಿ ಗಡಿ ನಿಯಂತ್ರಣದ ಉಲ್ಲಂಘನೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿ.ಆದರೂ ಬಾಂಬೆ ಮತ್ತಿತರ ಹೊರ ರಾಜ್ಯ ಅಥವ ಹೊರ ಜಿಲ್ಲೆಗಳಿಂದ ಸ್ವಗ್ರಾಮಗಳಿಗೆ ಆಗಮಿಸಿರುವವರ ಕೊರೊನಾ ಪರೀಕ್ಷೆಗೆ ಮೊಬೈಲ್ ವಾಹನವನ್ನು ಬಳಸುವ ಮೂಲಕ ಆದಷ್ಟು ಬೇಗ ತಪಾಸಣೆಯಾಗಬೇಕಿದೆ.
ಅಲ್ಲದೆ, ಸಾಮಾಜಿಕ ಅಂತರವೊ0ದೆ ಮದ್ದಾಗಿರುವ ನಿಟ್ಟಿನಲ್ಲಿ ನಮ್ಮ ರಕ್ಷಣೆ-ನಮ್ಮ ಹೊಣೆ ಎಂಬ ಘೋಷವಾಕ್ಯದ ಸಂಕಲ್ಪ ಪ್ರತಿಯೊಬ್ಬರ ಪ್ರತಿಜ್ಞೆಯಾಗಬೇಕು ಎಂದರು.
ಪಾAಡವಪುರ ಉಪವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್ ಕುಂಞ ಅಹಮ್ಮದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಧನಂಜಯ, ತಾ.ಪಂ. ಇಒ ಅನಂತರಾಜು, ಸರ್ಕಲ್ ಇನ್ಸ್ ಪೆಕ್ಟರ್ ರಾಜೇಂದ್ರ ಹಾಗೂ ಪುರಸಭಾ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಇದ್ದರು.

ಎಸ್.ವೆಂಕಟೇಶ್ ಎಕ್ಸ್ ಪ್ರೆಸ್ ಟಿವಿ ನಾಗಮಂಗಲ(ಮ0ಡ್ಯ)

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ.

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html deneme bonusu veren sitelercasino sitelerimıknatısmaç izle