Connect with us

ಆರೋಗ್ಯ / HEALTH

ಶ್ರಮಿಕ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಕ್ಷಣ ಗಣನೆ

Published

on

ಹುಬ್ಬಳ್ಳಿ : ಹುಬ್ಬಳ್ಳಿ-ಜೋಧಪುರ ಶ್ರಮಿಕ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಧಾರವಾಡ ಜಿಲ್ಲೆಯಿಂದ ೧,೪೫೨ ವಲಸೆ ಕಾರ್ಮಿಕರು ರಾಜಸ್ಥಾನಕ್ಕೆ ತೆರಳಲು ಸರ್ಕಾರ ರೈಲು ವ್ಯವಸ್ಥ ಕಲ್ಪಿಸಿದೆ.
ಅಂದ ಹಾಗೇ ವಲಸೆ ಕಾರ್ಮಿಕರು,ವಿದ್ಯಾರ್ಥಿಗಳನ್ನು ತವರೂರಿಗೆ ಕಳುಹಿಸುವುದಕ್ಕಾಗಿ ಹುಬ್ಬಳ್ಳಿ-ಜೋಧಪುರ-ಹುಬ್ಬಳ್ಳಿ ಮಧ್ಯೆ ೨ ಟ್ರಿಪ್ ಶ್ರಮಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಮಾಡಲಿದೆ.
ಇಂದು ಮತ್ತು ನಾಳೆ ಮಧ್ಯಾಹ್ನ ೧೨ ಗಂಟೆಗೆ ಹುಬ್ಬಳ್ಳಿಯಿಂದ ಹೊರಡಲಿದೆ.ಇಲ್ಲಿಂದ ಹೊರಟ ರೈಲು ಮಾರನೇ ದಿನ ಮಧ್ಯಾಹ್ನ ೨.೩೦ಕ್ಕೆ ಜೋಧಪುರ ತಲುಪಲಿದೆ. ಮೇ ೧೪ ಮತ್ತು ೧೫ರಂದು ಸಂಜೆ ೬ ಗಂಟೆಗೆ ಜೋಧಪುರದಿಂದ ಹೊರಡುವ ಈ ರೈಲು, ಮಾರನೇ ದಿನ ರಾತ್ರಿ ೧೧.೫೫ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದೆ.
ಮಿರಜ್, ಪುಣೆ, ವಾಸಾಯಿ ರೋಡ, ವಡೋದರಾ, ಪಾಲಂಪುರ ಮಾರ್ಗ ಮೂಲಕ ಸಂಚರಿಸಲಿದೆ. ಹುಬ್ಬಳ್ಳಿಯಿಂದ ರಾಜಸ್ಥಾನಕ್ಕೆ ತೆರಳಲು ಜಿಲ್ಲಾಡಳಿತದ ಬಳಿ ಈಗಾಗಲೇ ೧,೪೫೨ ಜನ ಹೆಸರು ನೋಂದಾಯಿಸಿದ್ದಾರೆ.
ಇನ್ನು ಬೆಳಗ್ಗೆ ೬ ಗಂಟೆಯಿAದ ಎಲ್ಲ ಶ್ರಮಿಕ ವರ್ಗದವರ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ ನಡೆದಿದೆ.ಇದಕ್ಕಾಗಿ ಪಾರ್ಕಿಂಗ್ ಪ್ರದೇಶದಲ್ಲಿ ೧೫ ಕೌಂಟರ್ ತೆರೆಯಲಾಗಿದೆ.ಆರೋಗ್ಯದ ವರದಿಯನ್ನು ನೋಂದಾಯಿತ ಗುರುತಿನ ಸಂಖ್ಯೆಯಡಿ ದಾಖಲಿಸಲಾಗುತ್ತದೆ.
ವಲಸೆ ಕಾರ್ಮಿಕ ರಾಜಸ್ಥಾನಕ್ಕೆ ತೆರಳಿದ ನಂತರ ಯಾರಿಗಾದ್ರು ಕೊರೊನಾ ಸೋಂಕು ಪಾಸಿಟಿವ್ ಕಂಡುಬAದಲ್ಲಿ ಈ ಗುರುತಿನ ಸಂಖ್ಯೆಯ ಸಹಾಯದಿಂದ ಆತನ ಹಿಸ್ಟರಿ ಕಂಡುಹಿಡಿಯಲು ಸರಳವಾಗಲಿದೆ.ಆರೋಗ್ಯ ತಪಾಸಣೆ ವೇಳೆ ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಾಸ ಕಂಡುಬರುವ ಕಾರ್ಮಿಕರ ಪ್ರವಾಸ ರದ್ದು ಮಾಡಲಾಗುತ್ತದೆ.೨೪ ಬೋಗಿ ಹೊಂದಿರುವ ಶ್ರಮಿಕ ಎಕ್ಸ್ಪ್ರೆಸ್ ರೈಲು ಇದಾಗಿದ್ದು,೧೮ ಬೋಗಿಗಳಲ್ಲಿ ತಲಾ ೭೨ ಜನರು ಪ್ರಯಾಣಿಸಲಿದ್ದಾರೆ.೪ ಬೋಗಿಗಳಲ್ಲಿ ತಲಾ ೩೮ ಜನರು ಹಾಗೂ ರೈಲ್ವೆ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಇರಲಿದ್ದಾರೆ.ಇನ್ನುಳಿದ ೨ ಬೋಗಿಗಳನ್ನು ಮೀಸಲು ಸ್ಥಿತಿಯಲ್ಲಿ ಇಡಲಾಗಿದೆ.
ಒಂದು ವೇಳೆ ಇನ್ನೂ ಹೆಚ್ಚಿನ ಪ್ರಯಾಣಿಕರು ಕೊನೇ ಕ್ಷಣದಲ್ಲಿ ಬಂದಲ್ಲಿ, ಮೀಸಲಿಟ್ಟಿರುವ ಈ ಬೋಗಿಗಳಲ್ಲಿ ಅವಕಾಶ ನೀಡಲಾಗುತ್ತದೆ. ಅದರ ಜೊತೆಗೆ ಪ್ರಯಾಣಿಕರಿಗೆ ತೊಂದರೆ ಆಗದಂತೆ ಊಟೋಪಚಾರದ ವ್ಯವಸ್ಥೆಯನ್ನಯ ಜಿಲ್ಲಾಡಳಿತ ಮಾಡಿಕೊಂಡಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ.

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis