ಪಾವಗಡದಲ್ಲಿ ೨೦ಕ್ಕೂ ಹೆಚ್ಚು ಕುರಿಗಳು ಸಾವು

ಪಾವಗಡ(ತುಮಕೂರು):ಜೋಳದ ಸಿಪ್ಪೆ ತಿಂದು ೨೦ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಪಾವಗಡ ತಾಲೂಕಿನ ಕದಿರೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕದಿರೆಹಳ್ಳಿ ಗ್ರಾಮದ ರಾಮಣ್ಣಗೆ ಸೇರಿದ ೨೦ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸ್ಥಳಕ್ಕೆ ಪಶು ಇಲಾಖೆಯ ಅಧಿಕಾರಿಗಳು ಮತ್ತು ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜೀವನೋಪಾಯಕ್ಕಾಗಿ ಸಾಕಿದ್ದ ಕುರಿಗಳ ಸಾವಿನಿಂದ ಕುರಿಗಾಹಿ ರಾಮಣ್ಣ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಇಮ್ರಾನ್ ಉಲ್ಲಾ ಎಕ್ಸ್ ಪ್ರೆಸ್ ಟಿವಿ ಪಾವಗಡ(ತುಮಕೂರು)

Please follow and like us:

Related posts

Leave a Comment