ಆರೋಗ್ಯ / HEALTH

ಮೇ.೩೧ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

Published

on

ಸಿಂಧನೂರು(ರಾಯಚೂರು):ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಇದೇ ತಿಂಗಳು ೩೧ ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅಂದು ಕಾಂಗ್ರೆಸ್ ಪಕ್ಷದ ನಾಯಕರು,ಕಾರ್ಯಕರ್ತರು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರ ಜೊತೆಗೆ ತಾವು ಕೂಡ ಪ್ರತಿಜ್ಞೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದ್ದಾರೆ.
ಸಿಂಧನೂರು ನಗರದ ಯುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾತನಾಡಿದ ಅವರು,ಈಗಾಗಲೇ ರಾಜ್ಯ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿ ಪದಗ್ರಹಣಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.ಅದರಂತೆ ಅಂದು ಕೆಪಿಸಿಸಿ ಅಧ್ಯಕ್ಷರ ಜೊತೆಗೆ ತಾಲೂಕಿನ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಕೂಡ ಅಧಿಕಾರ ಸ್ವೀಕರಿಸಿ ಪಕ್ಷ ಸಂಘಟನೆಗೆ ಮುಂದಾಗಬೇಕೆAದು ಕರೆ ನೀಡಲಾಗಿದೆ ಎಂದು ಮನವಿ ಮಾಡಿದರು.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು(ರಾಯಚೂರು)

Click to comment

Trending

Exit mobile version