ಅಫಜಲಪುರ(ಕಲಬುರಗಿ):ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹಾಲಿನ ಡೈರಿ ಸುಟ್ಟು ಕರಕಲಾಗಿರುವ ಘಟನೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚನ್ನಪ್ಪ ಉಪ್ಪಿನ್ ಎಂಬುವರಿಗೆ ಸೇರಿದ ಹಾಲಿನ ಡೈರಿ ಬೆಂಕಿಯ ಕೆನ್ನಾಲಿಗೆಗೆ ಧಗ ಧಗನೆ ಹೊತ್ತಿ ಉರಿದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಅಷ್ಟೊತ್ತಿಗಾಗಲೇ ಒಳಗಿದ್ದ ೯೦ ಸಾವಿರ ರೂ.ನಗದು ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು.
ಇನ್ನು ಸ್ಥಳಕ್ಕಾಗಮಿಸಿದ ಸಮಾಜ ಸೇವಕ ಹಾಗೂ ಕೊರಬು ಫೌಂಡೇಶನ್ ಸಂಸ್ಥಾಪಕ ಜೆ.ಎಂ.ಕೊರಬು,ಚನ್ನಪ್ಪರಿಗೆ ಆತ್ಮಸ್ಥೈರ್ಯ ತುಂಬಿ ೧೦ ಸಾವಿರ ರೂ. ನೇರವು ನೀಡಿ ಮಾನವೀಯತೆ ಮೆರೆದರು.ಅಲ್ಲದೆ, ಅಂಗಡಿಯವರಿಗೆ ಕೂಡಲೇ ಪರಿಹಾರ ನೀಡುವಂತೆ ಸಮಾಜ ಸೇವಕರಾದ ಜೆ.ಎಂ.ಕೊರಬು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಈರಣ್ಷ ಎಂ.ವಗ್ಗೆ ಎಕ್ಸ್ ಪ್ರೆಸ್ ಟಿವಿ ಅಫಜಲಪುರ(ಕಲಬುರಗಿ)