ದಾವಣಗೆರೆ : ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಕಾರಿಗೆ ಮುತ್ತಿಗೆ ಹಾಕಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದಿಂದ ಸಚಿವರ ಕಾರಿಗೆ ಮುತ್ತಿಗೆ ಹಾಕಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಬಸವರಾಜು
ವಿ.ಶಿವಗಂಗಾ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಅಲ್ಲದೆ, ಸಚಿವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರದ ವಿರುದ್ಧ ಘೋಷಣೆ ಕೂಗಿ ಸಚಿವರಿಗೆ ಬಿಸಿ ಮುಟ್ಟಿಸಿದರು.
ಇನ್ನು ಪ್ರತಿಭಟನೆ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಬಸವರಾಜು ವಿ.ಶಿವಗಂಗಾ,ಕೋವಿಡ್ ೧೯ ಬಿಕ್ಕಟ್ಟಿನ ಮಧ್ಯೆ ಕೇಂದ್ರ ಸರ್ಕಾರವು ಹೊಸ ವಿದ್ಯುತ್ ಮಸೂದೆ ಜಾರಿಗೆ ತರುತ್ತಿದೆ.ದೇಶವೇ ಸಂಕಷ್ಟದಲ್ಲಿರುವಾಗ ಆಡಳಿತದಿಂದ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ,ಯಾವುದೇ ಕಾರಣಕ್ಕೂ ಹೊಸ ವಿದ್ಯುತ್ ಕಾಯ್ದೆ ಜಾರಿಗೆ ತರಬಾರದು.ಇದರ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿರ ಸ್ನೇಹಿತ ವಿದ್ಯುತ್ ಉದ್ಯಮಿ ಗೌತಮ್ ಅದಾನಿ ಸೇರಿ ಇತರರಿಗೆ ಲಾಬಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೊತೆಗೆ ಕೋವಿಡ್ ಬಿಕ್ಕಟ್ಟು ಸಂದರ್ಭ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಪ್ರವೀಣ್ ಕುಮಾರ್,ಯುವ ಮುಖಂಡರಾದ ಬಾತಿ ಶಿವಕುಮಾರ,ಕಿರಿಧರ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ದಾವಣಗೆರೆ