ಬೆಂಗಳೂರು ದಕ್ಷಿಣ ಮತ್ತು ಬೊಮ್ಮನಹಳ್ಳಿ ವಲಯಕ್ಕೆ 20 ಅಂಬ್ಯುಲೆನ್ಸ್ ಗಳನ್ನು ಶಿಕ್ಷಣ ಸಚಿವ ಮತ್ತು ಬೊಮ್ಮನಹಳ್ಳಿ ವಲಯ ಉಸ್ತುವಾರಿ ಸುರೇಶ್ ಕುಮಾರ್ ರವರು ಗೊಟ್ಟಿಗೆರೆ ಬಿಬಿಎಂಪಿ ಕಚೇರಿ ಬಳಿ 16 ವಾರ್ಡ್ ಗಳಿಗೆ ಹಸ್ತಾಂತರಿಸಿದರು. ಬಳಿಕ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳು ಮತ್ತು ಸ್ಥಳೀಯ ಕಾರ್ಪೋರೆಟರ್ ಗಳ ಜೊತೆ ಸಭೆ ನಡೆಸಿ ಕೊರೊನಾ ಹಾವಳಿ ತಡೆಗಟ್ಟುವ ಬಗ್ಗೆ ಚರ್ಚೆಯನ್ನು ನಡೆಸಿದರು.ಕೊರೊನಾ ತಡೆಗಟ್ಟುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಕೊರೊನಾ ಸೋಂಕಿತರ ಚಿಕಿತ್ಸೆ, ಕ್ವಾರಂಟೈನ್, ಸೀಲ್ ಡೌನ್ ಮತ್ತು ಮೃತರ ಅಂತ್ಯ ಸಂಸ್ಕಾರ ವೇಳೆ ಯಾವುದೇ ಲೋಪದೋಷಗಳೂ ಉಂಟಾಗಬಾರದು. ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಾಗಲೀ, ಸರ್ಕಾರಿ ಆಸ್ಪತ್ರೆಗಳಲ್ಲಾಗಲೀ ಸೋಂಕಿತರಿಗೆ ಚಿಕಿತ್ಸೆಗೆ ತೊಂದರೆಯಾಗಬಾರದು,ಅಧಿಕಾರಿಗಳು ಇವೆಲ್ಲವನ್ನೂ ಗಮನಿಸುತ್ತಿರಬೇಕು ಎಂದು ಸಭೆಯಲ್ಲಿ ತಿಳಿಸಿದರು.