ಗದಗ: ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ತನ್ನ ತಾಳಿ ಅಡವಿಟ್ಟು ಮನೆಗೆ ಟಿವಿ ತಂದಿದ್ದ ಮಹಿಳೆಗೆ ಇದೀಗ ಮಾಜಿ ಸಚಿವ ಜಮೀರ್ ಅಹ್ಮದ್ ನೆರವಿಗೆ ಬಂದಿದ್ದಾರೆ. ಗದಗ ಜಿಲ್ಲೆ ನಾಗೂರು ಗ್ರಾಮದ ಕಸ್ತೂರಿ ಎಂಬ ಮಹಿಳೆ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿ ಅಡವಿಟ್ಟು ಮನೆಗೆ ಟಿವಿ ತಂದಿದ್ದರು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಮಾಜಿ ಸಚಿವ ಜಮೀರ್ ಅಹಮದ್ 50 ಸಾವಿರ ರೂಪಾಯಿ ಧನ ಸಹಾಯ ಮಾಡುವುದಾಗಿ ಟ್ವಿಟರ್ನಲ್ಲಿ ತಿಳಿಸಿದ್ದರು. ಅದರಂತೆ ಇಂದು ಜಮೀರ್ ಆಪ್ತ ಸಹಾಯಕನ ಬಳಿ 50 ಸಾವಿರ ರೂಪಾಯಿ ಹಣ ಕಳುಹಿಸಿದ್ದಾರೆ. ಅಡವಿಟ್ಟ ತಾಳಿ ಬಿಡಿಸಲು 15 ಸಾವಿರ ಹಾಗು ಮಕ್ಕಳ ವಿದ್ಯಾಭ್ಯಾಸಕ್ಕಾಗಿ 35 ಸಾವಿರ ನೀಡಿ ಮಾನವೀಯತೆ ಮೆರೆದಿದ್ದಾರೆ.
ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು