ಶಿರಾ

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ರವರ ಜನ್ಮದಿನ..!

Published

on

ಶಿರಾ:-ತಾಲ್ಲೂಕು ಆಡಳಿತ ವತಿಯಿಂದ ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಜನ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ತಹಸೀಲ್ದಾರ್ ನಾಹಿದಾ ಜಮ್ ಜಮ್ ನೇತೃತ್ವದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು.ಈ ವೇಳೆ ಮಾತನಾಡಿದ ಅವರು , ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್ ಅವರ ಜಯಂತಿಯನ್ನು ಅದ್ದೂರಿಯಾಗಿ ಮಾಡಬೇಕಿತ್ತು ಆದರೆ ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲಾಗುತ್ತಿದೆ. ಕಳೆದ ವರ್ಷ ಪ್ರವಾಹ ಹಿನ್ನೆಲೆ ಸರಳವಾಗಿ ಆಚರಿಸಲಾಗಿತ್ತು ಎಂದರು. ಇನ್ನೂ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀಮತಿ ಭಾನುಮತಿ ಹಾಗೂ ನಗರಸಭೆ ಆಯುಕ್ತ ಪರಮೇಶ್ವರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ವಿವಿಧ ಮುಖಂಡರು ಹಾಜರಿದ್ದರು..

ವರದಿ- ಶ್ರೀಮಂತ್‌ಎಕ್ಸ್ ಪ್ರೆಸ್ ಟಿವಿ ಶಿರಾ

Click to comment

Trending

Exit mobile version