ಹುಬ್ಬಳ್ಳಿ : ವಾಣಿಜ್ಯನಗರಿಯಲ್ಲಿ ನಿನ್ನೆ ತಡರಾತ್ರಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳಾದ ಶ್ರೀನೀವಾಸ, ಪರಶುರಾಮ ಹಿರೇಕುಂಬಿ (26) ಅವಿನಾಶ ಬಸವರಾಜ ನರಗುಂದ (29), ಸಂಜೀವ ರೇವಣಸಿದ್ದಪ್ಪ ವಡ್ಡರ (28), ಮಧು ಕಲ್ಮೇಶ ಹಾದಿಮನಿ(25) ಎಂಬುವವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಂಜುನಾಥ ಹಾಗೂ ನಿಯಾಜ ಜೋರಮ್ಮನವರ ಎಂಬುವವರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ವರದಿ:ರಾಜು ಮುದುಗಲ್ ಎಕ್ಸ್ ಪ್ರೆಸ್ ಟಿವಿ..