Connect with us

ಹಾವೇರಿ

ಮಹಿಳಾ ಶಕ್ತಿಯೇ ಸಮಾಜದ ಶಕ್ತಿ: ಬಿ.ಸಿ.ಪಾಟೀಲ್..!

Published

on

ಹಾವೇರಿ:31: ‘ಸ್ತ್ರೀ’ ಎನ್ನುವುದೊಂದು ಧೀಶಕ್ತಿಯಾಗಿದ್ದು,ಮಹಿಳೆಯರು ಹೆಚ್ಚೆಚ್ಚು ಸಂಘಟಿತರಾಗುವ ಮೂಲಕ ಸಮಾಜದಲ್ಲಿ ತಮ್ಮ ಐಕ್ಯತಾಬಲ ಪ್ರದರ್ಶಿಸಬೇಕೆಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದರು. ಮಹಿಳೆಯರ ಸಂಘಟನಾ ಶಕ್ತಿಯೇ ಸಮಾಜದ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಮಾಸೂರು ಗ್ರಾಮದ ಧರ್ಮರಾಯನ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಹಾಗೂ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು -ತಿಪ್ಪಾಯಿಕೊಪ್ಪ ಗ್ರಾಮದ ಕೇಸರಿ ಮಹಿಳಾ ಘಟಕ ಉದ್ಘಾಟಿಸಿ, ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಮಹಿಳೆಯರು ರಾಜಕೀಯವಾಗಿ ಸಶಕ್ತರಾಗಲು ಕೇಸರಿಪಡೆ ಸಹಕರಿಸುತ್ತಿದೆ. ಚುನಾವಣೆಯಲ್ಲಿ ತಮ್ಮ ಗೆಲುವಿಗೆ ರಟ್ಟಿಹಳ್ಳಿ ಸೇರಿದಂತೆ ತಾಲೂಕಿನ ಎಲ್ಲಾ ಮಹಿಳೆಯರು ಸಹ ಸಾಕಷ್ಟು ಶ್ರಮವಹಿಸಿದ್ದು, ತಮ್ಮ ಗೆಲುವಿಗೆ ಕಾರಣರಾಗಿರುವ ಮಹಿಳೆಯರಿಗೆ ಧನ್ಯವಾದ ಸಲ್ಲಿಸಿದರು. ಮಹಿಳೆಯರು ಸಂಘಟಿತರಾದರೆ ಏನು ಬೇಕಾದರೂ ಸಾಧಿಸಬಹುದು. ಸಾಮಾಜಿಕ,ಆರ್ಥಿಕವಾಗಿ ಸಬಲರಾಗುವ ಜೊತೆಗೆ ಸ್ತ್ರೀಶಕ್ತಿ ರಾಜಕೀಯವಾಗಿಯೂ ಸಬಲರಾಗಬೇಕಿದೆ. ಜಗತ್ತು ಮುಂದುವರೆಯುತ್ತಿದ್ದರೂ ಎಲ್ಲೋ ಒಂದು ಕಡೆ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮಾತ್ರ ಹಿಂದುಳಿದ ಸ್ಥಿತಿಯಲ್ಲಿ ಇದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರ ಶಿಕ್ಷಣ ಮದುವೆಯವರೆಗೂ ಮಾತ್ರ ಮೀಸಲೆನ್ನುವಂತಹ ಮನಸ್ಥಿತಿ ಇನ್ನೂ ಹಾಗೆಯೇ ಇರುವುದು ಬೇಸರದ ಸಂಗತಿ. ಕಲಿಕೆ, ಹೊಸತನ, ಸಾಧಿಸುವ ಮನೋಭಾವ ಮದುವೆಯ ನಂತರವೂ ಮುಂದುವರೆಯಬೇಕು. ಸಂಸಾರ ವೈವಾಹಿಕ ಬದುಕಿಗಷ್ಟೇ ಸ್ತ್ರೀಯರ ಬದುಕು ಮೀಸಲಾಗದೇ ಸಮಾಜದಲ್ಲಿ ತನ್ನನ್ನು ತಾನು ಗುರುತಿಸಿಕೊಳ್ಳುವ ಸಾಧಕಿಯೂ ಆಗಬೇಕು. ಮಹಿಳೆಯರು ಹೆಚ್ಚೆಚ್ಚು ಸಾಧನೆಯಲ್ಲಿ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು. ಸ್ತ್ರೀ ಶಕ್ತಿ ಸಂಘಗಳು ,ಸಂಘಟನೆಗಳ ಅಭಿವೃದ್ಧಿಗೆ ತಾವು ಬೆನ್ನೆಲುಬಾಗಿ ನಿಲ್ಲುತ್ತಿದ್ದು, ಸರ್ಕಾರದಿಂದ ದೊರೆಯುವ ನೆರವು ಮತ್ತು ಅನುದಾನಗಳು ಸ್ತ್ರೀಸಂಘಗಳು ಪಡೆದುಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್, ಚಿತ್ರನಟಿ ಸಮಾಜಸೇವಕಿ ಸೃಷ್ಟಿಪಾಟೀಲ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

Published

on

By

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾ

ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ…

ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Continue Reading

ಹಾವೇರಿ

ಯಾರೋ ಮಾಡಿದ ತಪ್ಪಿಗೆ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ್..!

Published

on

By

ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ.ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,ಆ್ಯಪ್ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ.2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಆದರೀಗ ಆ್ಯಪ್ ಬೆಳೆಸಮೀಕ್ಷೆಯಲ್ಲಿ ಸೆ.11 ರ ಸಂಜೆವರೆಗೆ 76ಲಕ್ಷ ತಾಕುಗಳು ಸಮೀಕ್ಷೆಯಾಗಿರುವುದು ಹಮ್ಮೆಯ ವಿಚಾರ.ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ ಎಂದರು. ಕೆಲವೇಡೆ ನೆಟ್ ಪ್ರಾಬ್ಲಂನಿಂದಾಗಿ ತಡವಾಗಿದೆ. ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ನಟರಾಗಲೀ, ನಟಿಯರಾಗಲೀ ಯಾರೂ ತಪ್ಪುಮಾಡಿದರೂ ಅದು ತಪ್ಪೇ. ಡ್ರಗ್ಸ್ ದಂಧೆ ತನಿಖೆ ನಡೆಯುತ್ತಿದೆ. ಅಪರಾಧಿಗಳಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ. ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು.ಶೂಟಿಂಗ್ವೇಳೆಯಲ್ಲಿ ಸಣ್ಣತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ. ಈ ಹಾವಳಿ ಎಲ್ಲಾ ಎಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದು ಕಾಣುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ವರದಿ- ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Continue Reading

ಹಾವೇರಿ

ಇಂದ್ರಜಿತ್ ಲಂಕೇಶ್ ಅಕ್ಕ ಕೂಡ ಡ್ರಗ್ ಅಡಿಕ್ಟ್ : ಪ್ರಮೋದ್ ಮುತಾಲಿಕ್..!

Published

on

By

ಹಾವೇರಿ : ಸ್ಯಾಂಡಲ್ವುಡ್ ನಟ, ನಟಿಯರು ಡ್ರಗ್ಸ್ ಜಾಲದಾಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ ಇಂದ್ರಜಿತ್ ಲಂಕೇಶ್ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಇಂದ್ರಜಿತ್ ಲಂಕೇಶ್ ದೊಡ್ಡ ಪ್ರಮಾಣದಲ್ಲಿ ಹಿರೋ ಆಗಲು ಹೊರಟಿದ್ದಾರೆ. ನಿಮ್ಮ ಅಕ್ಕ ಗೌರಿ ಲಂಕೇಶ್ ಕೂಡ ಡ್ರಗ್ಸ್ ಅಡಿಕ್ಟ್ ಆಗಿದ್ದರು, ಆಗ ನಿವೇಲ್ಲಿ ಹೋಗಿದ್ರಿ ? ಆಗ ನೀವು ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಸರ್ಜಾ ಕುಟುಂಬದವರು ಶುದ್ಧವಾಗಿದ್ದಾರೆ, ಅವರನ್ನ ಯಾಕೆ ಡ್ರಗ್ಸ್ ಜಾಲಕ್ಕೆ ಲಿಂಕ್ ಮಾಡ್ತಿರಾ ಎಂದು ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಡ್ರಗ್ ಮಾಫಿಯಾದಲ್ಲಿ ಪೊಲೀಸರು ನಮ್ಮ ಕಡೆಯಿಂದ ಆಗಲ್ಲ ಎಂದು ಹೇಳಲಿ ನಾನು ಮಾಡಿ ತೋರಿಸುತ್ತೇನೆ ಎಂದು ಪೊಲೀಸ್ ಇಲಾಖೆಯಿಂದ ಸವಾಲ್ ಹಾಕಿದ್ದಾರೆ. ಗೃಹ ಸಚಿವರು ಹಾಗು ಸಿಟಿ ರವಿ ಡ್ರಗ್ಸ್ ಜಾಲವನ್ನ ಬೇರು ಸಮೇತ ಕಿತ್ತುಹಾಕುತ್ತೇವೆ ಎಂದು ಹೇಳಿದ್ದಾರೆ. ಈಗ ನಾಟಕವಾಡಿ, ಸ್ವಲ್ಪದಿನದಲ್ಲಿ ಎಲ್ಲಾ ಮರೆತು ಹೋಗುತ್ತಾರೆ ಎಂದಿದ್ದಾರೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Gruplarıistanbul escortesbet girişbullbahis girişbenimbahis girişbenimbahis