ಹಾಸನ : ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.ಸಕಲೇಶಪುರ ತಾಲೂಕಿನ ಕಾಡುಮನೆ ಸಮೀಪ ಇರುವ ಅಬ್ಬಿಗುಂಡಿಯಲ್ಲಿ ಘಟನೆ ನಡೆದಿದ್ದು, ರತನ್ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಹಾಲಯ ಅಮಾವಾಸ್ಯೆ ಹಿನ್ನೆಲೆ ಸಕಲೇಶಪುರ ಗ್ರಾಮಕ್ಕೆ ಬಂದಿದ್ದ ಯುವಕ ರತನ್, ತನ್ನ ಸಂಬಂಧಿಕರ ಜೊತೆ ಗುಡಾಣಗೆರೆ ಸಮೀಪ ಇರುವ ಅಬ್ಬಿಗುಂಡಿ ಜಲಪಾತಕ್ಕೆ ತೆರಳಿದ್ದಾರೆ. ಈ ವೇಳೆ ಕಾಲು ಜಾರಿ ನೀರಿನಲ್ಲಿ ಮುಳುಗಿ ರತನ್ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು