ಮಂಡ್ಯ

ಟಿಎಪಿಸಿಎಂಎಸ್ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿರಲಿಲ್ಲ- ಡಾ.ಯಮದೂರು ಸಿದ್ಧರಾಜು..!

Published

on

ಮಳವಳ್ಳಿ: ಸೆ.30ರಂದು ನಡೆಯಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ಕಿರುಗಾವಲು ಕ್ಷೇತ್ರದಿಂದ ಶೆಟ್ಟಹಳ್ಳಿ ಶ್ರೀನಿವಾಸ್ ರವರ ಟಿವಿ ಗುರುತಿನ ಪರವಾಗಿ ತಾಲ್ಲೂಕಿನ ತಳಗವಾದಿ ಗ್ರಾಮದಲ್ಲಿ ಮತ ಯಾಚನೆ ಮಾಡಿದರು. ಬಳಿಕ ಡಾ.ಯಮದೂರು ಸಿದ್ಧರಾಜು ಮಾತನಾಡಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಆಡಳಿತವಿದ್ದು, ತಾಲೂಕಿನಲ್ಲಿ ಬೆಜಿಪಿ ಪಕ್ಷ ಸಾಕಷ್ಟು ಪ್ರಬಲವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸ್ಪರ್ಧೆ ಮಾಡುತ್ತಿದ್ದು, ಟಿಎಪಿಸಿಎಂಎಸ್ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿರಲಿಲ್ಲ. ಈ ಬಾರಿ ಸ್ಪರ್ಧೆ ಮಾಡಿದ್ದು, ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು. ಗ್ರಾಮ ಪಂಚಾಯಿತಿ ಸದಸ್ಯ ಸುಬ್ಬಣ್ಣ ಬಿಜೆಪಿ ಮುಖಂಡರಾದ ಅಶೋಕ್ ಹುಚ್ಚೇಗೌಡ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೇದಾವತಿ ವನಜಾಕ್ಷಿ ಬಡ್ಡಿ ಹನುಮಂತು ಗಿರೀಶ್ ರಾಮಣ್ಣ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸಂದೇಶ್ ಹಲವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version