ಚಿತ್ರದುರ್ಗ : ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನ ಹೊಡೆದು ಕೊಂದಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಎರಡು ವರ್ಷದ ಪೂರ್ಣಿಕಾ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಪದೇ ಪದೇ ಬೆಚ್ಚಿ ಬೀಳುತ್ತಿದ್ದ ಮಗುವನ್ನ ಮಾಟಗಾರ ರಾಕೇಶ್ ಬಳಿ ಕರೆದುಕೊಂಡು ಹೋಗಿದ್ದರು. ತಾನು ಯಲ್ಲಮ್ಮನ ಆರಾಧಕ ಎಂದು ಹೇಳಿಕೊಂಡಿದ್ದ ರಾಕೇಶ್, ಮಗುವಿಗೆ ದೆವ್ವ ಹಿಡಿದಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ.ದೆವ್ವ ಬಿಡಿಸುವ ನೆಪದಲ್ಲಿ ಮಗುವಿನ ಮೇಲೆ ಬೆತ್ತದಿಂದ ಹೊಡೆದಿದ್ದು, ತೀವ್ರವಾಗಿ ಅಸ್ವಸ್ಥಳಾಗಿ ಮಗು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದೆ. ಸದ್ಯ ಮಾಟಗಾರ ರಾಕೇಶ್ ವಿರುದ್ಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು