ಮಳವಳ್ಳಿ: ಜಯಕರ್ನಾಟಕ ಸಂಘಟನೆವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಸಂಘಟನೆ ಸೇರ್ಪಡೆ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಅನಂತಾರಾಮ್ ವೃತ್ತದಲ್ಲಿ ಜಯಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಉಪತಹಸೀಲ್ದಾರ್ ವಿ .ನಟರಾಜು, ಹರ್ಷಿತ್, ಲಿಖಿತ್ ,ಅಪ್ಪು,ಮುನ್ನರವರು ರಾಜ್ಯಾಧ್ಯಕ್ಷ ಬಿ.ಎನ್ ಜಗದೀಶ್. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ ಸಮ್ಮುಖದಲ್ಲಿ ಜಯಕರ್ನಾಟಕ ಸಂಘಟನೆ ಸೇರ್ಪಡೆಯಾದರು. ಬಳಿಕ ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್ ಜಗದೀಶ್ ಮಾತನಾಡಿ, ಗಾಂಧಿಜೀರವರನ್ನು ಒಂದು ದಿನ ನೆನಪು ಮಾಡಿಕೊಂಡರೆ ಸಾಲದು ಪ್ರತಿನಿತ್ಯ ನೆನಪು ಮಾಡಿಕೊಳ್ಳುವ ಜೊತೆಗೆ ಅವರ ತತ್ವವನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಭೂ ಸುಧಾರಣೆ ಕಾಯ್ದೆ ಸೇರಿದಂತೆ ಇನ್ನಿತರ ಕಾಯ್ದೆ ಜಾರಿಗೆ ತಂದಿದ್ದ ಬಗ್ಗೆ ನಮ್ಮ ಸಂಘಟನೆಯೂ ಹೋರಾಟಕ್ಕೆ ಇಳಿದಿದೆ ಎಂದರು. ಕಾರ್ಯಕ್ರಮದಲ್ಲಿ ಜಯಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ನಾಗೇಶ್, ತಾಲ್ಲೂಕು ಅಧ್ಯಕ್ಷ ರಮೇಶ್ , ಗೌರವಾಧ್ಯಕ್ಷ ಶಾಮ್ ಸುಂದರ್ ಶೆಟ್ಟಿ,ರಾಜ್ ಕುಮಾರ, ಅನಂತ, ಸೇರಿದಂತೆ ಮತ್ತಿತ್ತರರು ಇದ್ದರು.
ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ