ಬೀದರ್

ಮನೆ ಹಾನಿ: ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್..!

Published

on

ಬೀದರ್: ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ಸಂಗೋಳಗಿ ಗ್ರಾಮದ ಬೊಮ್ಮಗೊಂಡೇಶ್ವರ ದೇವಸ್ಥಾನದ ಹತ್ತಿರವಿರುವ ಸರಸ್ವತಿ ಗಂಡ ಶಿವರಾಜ್ ರವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮನೆಗೆ ಭೇಟಿ ನೀಡಿ ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಬಂಡೆಪ್ಪ ಖಾಶೆಂಪುರ್,ಮನೆ ಸಂಪೂರ್ಣವಾಗಿ ಹಾಳಾಗಿದ್ದು,ಆದಷ್ಟು ಬೇಗ ಮನೆ ಕಳೆದುಕೊಂಡ ಕುಟುಂಬದವರಿಗೆ ಪರಿಹಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದ ಸದಸ್ಯರು,ಬೀದರ್ ದಕ್ಷಿಣ ಜೆಡಿಎಸ್ ಅಧ್ಯಕ್ಷರು ಸಂಜುರೆಡ್ಡಿ ನಿರ್ಣಾ,ರಾಜಶೇಖರ ಬನ್ನಳ್ಳಿ, ರವಿ,ಅಶೋಕ್ ಪಾಟೀಲ್,ಅನಿಲ್ ಪಾಟೀಲ್,ಬಾಬು ಮಳಗಾರ,ಶ್ರೀನಿವಾಸ,ಮಾರುತಿ ಹತ್ತಿ,ಸ್ಯಾಮಸನ್,ಈಶ್ವರ್,ನಾಗಶೆಟ್ಟಿ ಪಾಟೀಲ್,ಮೆಹಬೂಬ್ ಸಾಬ,ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು,ಸ್ಥಳೀಯ ಮುಖಂಡರು,ಕಾರ್ಯಕರ್ತರು,ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version