ತುಮಕೂರು :ಯಾವ ಪಕ್ಷ ಬೆಳಸುತ್ತೋ ಅದೆ ಪಕ್ಷಕ್ಕೆ ಬೆಂಕಿ ಹಾಕುವ ಕೆಲಸ ಸಿದ್ದರಾಮಯ್ಯ ಮಾಡ್ತಾಯಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಂತಿಮ ಮೊಳೆ ಹೊಡೆಯುವುದೇ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶಿರಾ ಬೈ ಎಲೆಕ್ಷನ್ ಸಭೆ ಬಳಿಕ ಮಾತನಾಡಿದ ಹೆಚ್ಡಿಕೆ, ಮುಂದೊಂದು ದಿನ ಕಾಂಗ್ರೆಸ್ ಪಕ್ಷಕ್ಕೆ ಏನಾಗಲಿದೆ ಎಂದು ನೋಡಿ ಎಂದಿದ್ದಾರೆ. ಜೆಡಿಎಸ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರನ್ನ ರಾಜಕೀಯ ಬೆಳಕಿಗೆ ತಂದಿದ್ದೇ ಜೆಡಿಎಸ್ ಪಕ್ಷ. ಕಾಂಗ್ರೆಸ್ ಪಕ್ಷ ಸೇರಿಕೊಂಡಿರುವುದು ಜೆಡಿಎಸ್ ಪಕ್ಷದ ಕಾರ್ಯಕರ್ತರ ದುಡಿಮೆ ಫಲವಾಗಿದೆ.ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದಲ್ಲಿ ಇವರನ್ನು ಯಾರು ಗುರುತಿಸುತ್ತಿರಲಿಲ್ಲ ಎಂದಿದ್ದಾರೆ.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು