ತುಮಕೂರು

ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೊನಾ ಸೋಂಕು ಧೃಡ !

Published

on

ತುಮಕೂರು : ಶಿರಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಈ ಬಗ್ಗೆ ದಿವಂಗತ ಸತ್ಯಾನಾರಾಯಣ್ ಪುತ್ರ ಸತ್ಯಪ್ರಕಾಶ್ ತಿಳಿಸಿದ್ದಾರೆ. ಕಳೆದ ಮೂರ್ನಾದಕು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಭ್ಯರ್ಥಿ ಅಮ್ಮಾಜಮ್ಮ,ನಿನ್ನೆ ಕೊರೊನಾ ಸೋಂಕಿನ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರ ವರದಿ ಬಂದಿದ್ದು, ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಹೀಗಾಗಿ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ಉಪಚುನಾವಣೆ ಹಿನ್ನೆಲೆ, ದಿವಂಗತ ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ ಅವರನ್ನ ಜೆಡಿಎಸ್ ಅಭ್ಯರ್ಥಿ ಎಂದು ದೇವೇಗೌಡರು ಘೋಷಣೆ ಮಾಡಿದ್ದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version