ವಿಜಯಪುರ: ಜಗತ್ತಿನ ಅತ್ಯಂತ ದೊಡ್ಡ ಸುಳ್ಳಿನ ನಾಯಕ ಅಂದ್ರೆ ಅದುವೇ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನದ್ವನಿ ಧಮನದ ವಿರುದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ್ ಬೊರಾಮಣಿ ಹರಿಹಾಯ್ದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸವೇಶ್ವರ ವೃತ್ತದಲ್ಲಿ ಉತ್ತರ ಪ್ರದೇಶದಲ್ಲಿ ದಲಿತ ಹುಡುಗಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು, ಕೇಂದ್ರ ಹಾಗೂ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ವಿರೋದಿಯ ಕರಾಳ ಮಸೂದೆಯನ್ನು ಸೃಷ್ಟಿ ಮಾಡುತ್ತಿದ್ದಾರೆ. ಕೂಡಲೇ ಸರಕಾರ ಎಚ್ಚೇತ್ತುಕೊಂಡು ಅತ್ಯಾಚಾರ ವೆಸಗಿದವರನ್ನು, ಕಾನೂನಾತ್ಮಕ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ರೈತ ವಿರೋದಿಯ ಕರಾಳ ಮಸೂದೆಯನ್ನು ಕೈ ಬಿಡಬೇಕು. ಒಂದು ವೇಳೆ ಸರ್ಕಾರ ದುಷ್ಟಗುಣಗಳನ್ನೇ ಮುಂದುವರೆಸಿದ್ರೆ ರಸ್ತೆ ರುಖೊ,ರೈಲು ರುಖೊ ಅಂತಾ ಉಗ್ರವಾದ ಪ್ರತಿಭಟನೆಯನ್ನು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇನ್ನೂ ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕ್ ಪಂಚಾಯತ್ ಸದಸ್ಯರು, ಹಾಗೂ ವಿವಿಧ ಅಂಗ ಘಟಕಗಳ ಪದಾದಿಕಾರಿಗಳು ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ವರದಿ-ಶಂಕರ್ ಜಮಾದಾರ ಎಕ್ಸ್ ಪ್ರೆಸ್ ನ್ಯೂಸ್ ಇಂಡಿ.