ಲಿಂಗಸೂಗೂರು: ಉತ್ತರಪ್ರದೇಶ ಯುವತಿ ಮನೀಶಾಳ ಅತ್ಯಾಚಾರ,ಕೊಲೆ ಖಂಡಿಸಿ ಪಟ್ಟಣದ ಪ್ರಗತಿಪರ ಸಂಘಟನೆಗಳಿಂದ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಢಿದ್ದು, ಪ್ರತಿಭಟನೆಯಲ್ಲಿ ನೂರಾರು ಸಂಘಟನಾಕಾರು ಭಾಗಿಯಾಗಿದ್ದರು. ಪ್ರತಿಭಟನೆಯಿಂದಾಗಿ ಹಟ್ಟಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದ್ದು, ಪ್ರತಿಭಟನಕಾರರು ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸರ್ಕಾರದ ವಿರುದ್ದ ಕಿಎಡಿಕಾರಿದರು. ಆತ್ಯಾಚಾರವೆಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಅಪರಾಧಿಗಳಿಗೆ ಶಿಕ್ಷೆಯ ಪ್ರಕ್ರಿಯೆ ವಿಳಂಬವಾಗುತ್ತಿದೆ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಪ್ರತಿಭಟನಕಾರರು ಲಿಂಗಸೂಗೂರು ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಗಸೂಗೂರು