ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಸುಮಾರು 1.39 ಕೋಟಿ ಮೌಲ್ಯದ 1,20,000 ಲೀಟರ್ ಸ್ಪಿರಿಟ್ ನ್ನು ಜಪ್ತಿ ಮಾಡಿದ್ದಾರೆ, ನಾಲ್ಕು ಟ್ರಕ್ ಗಳಲ್ಲಿ ಸ್ಪಿರಿಟ್ ENA ಅಂಧ್ರದಿಂದ ಕೇರಳ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ಅಕ್ರಮವಾಗಿ ಕರ್ನಾಟಕ ಗಡಿ ಪ್ರವೇಶಿಸಿ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ಎಸ್ಸಾರ್ ಪೆಟ್ರೋಲ್ ಬಂಕ್ ಬಳಿ ಸ್ಪಿರಿಟ್ ತುಂಬಿದ ಟ್ಯಾಂಕರ್ ಗಳನ್ನು ನಿಲ್ಲಿಸಲಾಗಿತ್ತು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಆಧಿಕಾರಿಗಳು ಸ್ಪಿರಿಟ್ ತುಂಬಿದ ಲಾರಿಗಳನ್ನು ವಶಪಡಿಸಿಕೊಂಡ ನಾಲ್ಕು ಜನ ಚಾಲಕರನ್ನು ಬಂಧಿಸಲಾಗಿದೆ.
ವರದಿ- ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ