ನಂಜನಗೂಡು: ನಿನ್ನೆ ರಾತ್ರಿ ಅನಾಮಧೇಯ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಹಾಗು ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಂಡುವಿನಹಳ್ಳಿ ಗ್ರಾಮದ 22 ವರ್ಷದ ಸತೀಶ್ ಎಂಬ ಯುವಕ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನೂ ಸ್ಥಳಕ್ಕೆ ಸ್ಥಳೀಯ ಬೇಗೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಶವವನ್ನು ಮರಣೊತ್ತರ ಪರೀಕ್ಷೆಗೆಂದು ಗುಂಡ್ಲುಪೇಟೆ ಆಸ್ಪತ್ರೆಗೆ ಸಾಗಿಸಲಾಗಿದೆ.
ವರದಿ-ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು