Connect with us

ಮೈಸೂರು

ಕುಸಿದ ತಂಬಾಕು ದರ, ಆತಂಕದಲ್ಲಿ ಬೆಳೆಗಾರರು..!

Published

on

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಮಳೆ ಆಶ್ರಿತ ಪ್ರದೇಶವಾಗಿದ್ದು, ಇಲ್ಲಿನ ರೈತರು ಶುಂಠಿ ಮತ್ತು ಜೋಳವನ್ನು ಬೆಳೆಯುತ್ತಾರೆ. ಆದರೆ ಅದಕ್ಕೂ ಸರಿಯಾದ ದರ ಸಿಗದಿರುವುದರಿಂದ ಲಕ್ಷಾಂತರ ರೈತರು ತಂಬಾಕು ಬೆಳೆಯನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ರೈತರು ಉತ್ತಮವಾದ ತಂಬಾಕನ್ನು ಬೆಳೆಯುತ್ತಿದ್ದಾರೆ. ಆದರೆ ತಂಬಾಕು ಬೆಳೆಗಾರರಿಗೆ ಸರಿಯಾದ ದರ ಸಿಗದೇ ನಷ್ಟ ಅನುಭವಿಸಿ ಸಂಕಷ್ಟದಲ್ಲಿದ್ದಾರೆ. ತಂಬಾಕು ಬೆಳೆಗಾರರು ಉತ್ಕೃಷ್ಟವಾದ ತಂಬಾಕನ್ನು ಬೆಳೆದರೆ ಅವರಿಗೆ ಉತ್ತಮ ದರ ಸಿಗುತ್ತದೆ ಎಂದು ನೀವು ಭರವಸೆ ನೀಡಿದ್ದೀರಾ, ಆದುದರಿಂದ ಅವರ ತಂಬಾಕನ್ನು ನೀವು ಹೆಚ್ಚು ದರ ನೀಡಿ ಖರೀದಿ ಮಾಡಬೇಕಾಗುತ್ತದೆ ಎಂದು ಪಿರಿಯಾಪಟ್ಟಣ ಶಾಸಕ ಕೆ ಮಹದೇವ್ ಐಟಿಸಿ ಹಾಗೂ ಇತರೆ ಕಂಪೆನಿಯವರಿಗೆ ಒತ್ತಾಯಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯ ರೈತ ಸಭಾಂಗಣದಲ್ಲಿ ಆಯೋಜಿಸಿದ್ದ ತಂಬಾಕು ಬೆಳೆಗಾರರು ಮತ್ತು ಖರೀದಿದಾರರ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.ತಂಬಾಕು ಮಂಡಳಿಯವರು ರೈತರಿಗೆ ವರ್ಷದಲ್ಲಿ ಇಂತಿಷ್ಟೇ ತಂಬಾಕು ಬೆಳೆಯ ಬೇಕು ಎಂದು ನಿಗದಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ. ನಷ್ಟ ಅನುಭವಿಸುವುದು ತಪ್ಪುತ್ತದೆ. ಈ ತಂಬಾಕು ಬೆಳೆಗಾರರ ಸಮಸ್ಯೆಯನ್ನು ವಿಧಾನಸಭೆಯಲ್ಲಿ ಚರ್ಚಿಸುತ್ತೇನೆ ಸರಕಾರದ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ನಾವು ನಿರ್ಧಾರ ತೆಗೆದುಕೊಳ್ಳಬೇಕು. ನಾನು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿ ನೇರವಾಗಿ ಸರಕಾರವೇ ತಂಬಾಕನ್ನು ಖರೀದಿ ಮಾಡಬೇಕು ಹಾಗೂ ಬೆಂಬಲ ಬೆಲೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು. ತಂಬಾಕು ಬೆಳೆಗಾರ ಹುಣಸೇಕುಪ್ಪೆ ಚಂದ್ರು ಮಾತನಾಡಿ, 4 ಮತ್ತು 5ನೇ ದರ್ಜೆ ತಂಬಾಕಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ದರದಲ್ಲಿ ತಾರತಮ್ಯ ವಾಗುತ್ತಿದೆ ಇದರಿಂದ ನಷ್ಟ ಅನುಭವಿಸುವಂತಾಗಿದೆ ನಾವು ಹಾಕುವ ಬಂಡವಾಳಕ್ಕಿಂತ ನಮಗೆ ಸಿಗುವ ದರ ಕಡಿಮೆಯಾಗುತ್ತಿದೆ ಇದರಿಂದ ಸಾಲದ ಹೊರೆ ಜಾಸ್ತಿಯಾಗುತ್ತಿದೆ ಆದುದರಿಂದ ತಮಗೆ ಸರಿಯಾದ ದರ ನೀಡಬೇಕೆಂದು ಒತ್ತಾಯಿಸಿದರು.ಇಂಡಿಯನ್ ಟೊಬ್ಯಾಕೊ ಕಂಪನಿಯ ಲೀಪ್ ವ್ಯವಸ್ಥಾಪಕ ಶ್ರೀನಿವಾಸ್ ರೆಡ್ಡಿ ಮಾತನಾಡಿ, ಕಳೆದ 50 ವರ್ಷಗಳಿಂದ ತಾಲೂಕಿನಲ್ಲಿ ರೈತರು ವಾಣಿಜ್ಯ ಬೆಳೆಯದ ತಂಬಾಕು ಬೆಳೆಯನ್ನೇ ಹೆಚ್ಚಾಗಿ ಅವಲಂಬಿಸಿದ್ದು, ಈ ಭಾಗದ ರೈತರು ಉತ್ಕೃಷ್ಟವಾದ ತಂಬಾಕು ಬೆಳೆಯನ್ನು ಬೆಳೆಯುತ್ತಿದ್ದಾರೆ. ನಾವೂ ಸಹ ರೈತರಿಗೆ ತಂಬಾಕು ಬೆಳೆಯಲು ಎಲ್ಲಾ ರೀತಿಯ ಸಹಕಾರ ಮಾರ್ಗದರ್ಶನ ಕೊಡುತ್ತಿದ್ದೇವೆ ನಾವು ಖರೀದಿಸುವ ತಂಬಾಕಲ್ಲಿ ಶೇಕಡಾ 15% ರಷ್ಟು ಮಾತ್ರ ಸ್ವದೇಶದಲ್ಲಿ ಬಳಕೆಯಾಗುತ್ತದೆ. ಶೇಕಡಾ 80% ರಷ್ಟು ತಂಬಾಕು ವಿದೇಶಿ ಕಂಪನಿಗಳಿಗೆ ರಫ್ತಾಗುತ್ತದೆ. ವಿದೇಶದಲ್ಲಿ ತಂಬಾಕಿಗೆ ಬೇಡಿಕೆ ಹೆಚ್ಚಾಗಿದ್ದು ಈ ವರ್ಷ ಕೊರೋನಾ ಸಂಕಷ್ಟದಿಂದ ಯಾವುದೇ ವಿದೇಶಿ ಕಂಪನಿಗಳು ತಂಬಾಕು ಆಮದಿಗೆ ಮುಂದಾಗುತ್ತಿಲ್ಲ ಈ ಕಾರಣದಿಂದ ತಂಬಾಕಿನ ಸರಾಸರಿ ದರದಲ್ಲಿ ವ್ಯತ್ಯಯವಾಗಿದ್ದು, ನಮ್ಮಿಂದ ಆಗುವ ಎಲ್ಲಾ ಸಹಾಯ ಸಹಕಾರ ನೀಡಿ ರೈತರ ಹಿತ ಕಾಪಾಡುವುದಾಗಿ ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ತಂಬಾಕು ಬೆಳೆಗಾರರಿಗೆ ಖಚಿತವಾಗಿ ಉತ್ತಮ ಬೆಲೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಪ್ರಾದೇಶಿಕ ವ್ಯವಸ್ಥಾಪಕ ಮಾರಣ್ಣ,ಹರಾಜು ಅಧೀಕ್ಷಕ ಮಂಜುನಾಥ್ ‘ರೈತ ಮುಖಂಡರಾದ ಅಣ್ಣಯ್ಯ ಶೆಟ್ಟಿ, ರಾಮನಾಥತುಂಗ ಶ್ರೀನಿವಾಸ್’ ಮಲ್ಲಿಕಾರ್ಜುನ್, ನಾಗೇಂದ್ರ ,ಹಾಗೂ ಬೆಳೆಗಾರರು ವಿವಿಧ ಕಂಪೆನಿಯ ವ್ಯವಸ್ಥಾಪಕರು ಹಾಜರಿದ್ದರು.

ವರದಿ-ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

Published

on

By

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ ಸದಸ್ಯರು ರೋಗ ನಿರ್ಮೂಲ ಮಾಡಲು ಹೆಚ್ಚು ಗಮನಹರಿಸಬೇಕು ಎಂದರು.

ತಾಲೂಕು ಆರೋಗ್ಯಧಿಕಾರಿ ಡಾ ಶರತ್ ಬಾಬು ಮಾತನಾಡಿ,ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗಳು ಹಾಗೂ ಪ್ರಾಥಮಿಕ  ಸಂಪರ್ಕದಲ್ಲಿ ಇದ್ದ ರೋಗಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದ ಮಾತ್ರೆಗಳನ್ನು ನೀಡಬೇಕು.ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ.ಸುತ್ತೋಲೆ ಉಲ್ಲಂಘಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ಪುರಸಭಾ ಮುಖ್ಯಾಧಿಕಾರಿ ಪ್ರಸನ್ನಕುಮಾರ್, ಪುರಸಭೆ ಸದಸ್ಯರುಗಳು ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

 

ರಾಮೇಗೌಡ ಎಕ್ಸ್ ಪ್ರೆಸ್ ಟಿವಿ (ಪಿರಿಯಾಪಟ್ಟಣ) ಮೈಸೂರು

Continue Reading

ಮೈಸೂರು

ಕಾಡಿನಿಂದ ನಾಡಿಗೆ ಬಂದ ಆನೆಗಳು..!

Published

on

By

ಪಿರಿಯಾಪಟ್ಟಣ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿಗೆಕೋರೆ ಗ್ರಾಮದಿಂದ ಕಾವೇರಿ ನದಿ ದಾಟಿ ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಕಮರವಳ್ಳಿ ಗ್ರಾಮಕ್ಕೆ 4 ಆನೆಗಳು ಬಂದಿದ್ದು ಗ್ರಾಮಸ್ಥರು ಜೀವಭಯದಲ್ಲಿ ರಾತ್ರಿ ಸಮಯದಲ್ಲಿ ಕಾಲ ಕಳೆಯ ಬೇಕಾದ ಪರಿಸ್ಥೀತಿ ನಿರ್ಮಾಣವಾಗಿದೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿರಿಯಾಪಟ್ಟಣದ ತಾಲ್ಲೂಕಿನ ವಲಯ ಅರಣ್ಯಾಧಿಕಾರಿ ರತನ್ ಹಾಗೂ ಅರಣ್ಯ ಸಿಬ್ಬಂದಿಗಳು ಮತ್ತು ಸೋಮವಾರಪೇಟೆ ತಾಲ್ಲೂಕಿನ ಅರಣ್ಯ ಇಲಾಖೆ ಸಿಬ್ಬಂದಿಗಳು, ಬೆಟ್ಟದಪುರ ಠಾಣೆಯ ಪೊಲೀಸರು ಸೇರಿ ಆನೆಗಳನ್ನು ಊರಿನಿಂದ ಓಡಿಸುವ ಪ್ರಯತ್ನ ನಡೆಸುತ್ತಿದ್ದರು. ನಂತರ ವಲಯ ಅರಣ್ಯಾಧಿಕಾರಿ ರತನ್ ಮಾತನಾಡಿ ಜನರು ದೂರ ಇದ್ದು ಆನೆಗಳನ್ನು ಓಡಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸ್ಥಳದಲ್ಲಿ ಬೆಟ್ಟದಪುರ ಪೊಲೀಸ್ ಠಾಣೆಯ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಎಎಸ್ ಐ ವಿಜಯ್, ಸೋಮಶೇಖರ್ ಉಪ ವಲಯ ಅರಣ್ಯಾಧಿಕಾರಿ ಮಧುಸೂದನ್,ಮಹೇಶ್, ಪೆಮ್ಮೆಯ ಅರಣ್ಯ ರಕ್ಷಕ ಮಹೇಶ್ ,ಸಂದೀಪ್, ಹರಿಶ್, ಯಲಗೂರೇಶ, ಸೇರಿದಂತೆ ಸಾಕಷ್ಟು ಜನ್ರು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದಲ್ಲಿ ತೊಡಗಿದ್ದರು.

ವರದಿ- ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Continue Reading

ಮೈಸೂರು

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ..!

Published

on

By

ನಂಜನಗೂಡು: ತಾಲ್ಲೂಕು ಆಡಳಿತದ ವತಿಯಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಸೇರಿದಂತೆ ವಿವಿಧ ಗಣ್ಯರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು.ಇದೇ ಸಂದರ್ಭ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ನಿಗಮ-ಮಂಡಳಿಗಳ ನೂತನ ಅಧ್ಯಕ್ಷರುಗಳಾದ ಎಸ್ ಮಹದೇವಯ್ಯ ಕೃಷ್ಣಪ್ಪಗೌಡ ನಗರಸಭೆ ಅಧ್ಯಕ್ಷ ಮಹದೇವಸ್ವಾಮಿ ಹಾಗೂ ಮತ್ತಿತರ ಗಣ್ಯರಿಂದಲೂ ಮಾಲಾರ್ಪಣೆ ಮಾಡಲಾಯಿತು. ಬಳಿಕ ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಕಾಂಪೋಸ್ಟ್ ನಿಗಮ ಮಂಡಳಿಯ ಅಧ್ಯಕ್ಷರಾದ ಎಸ್ ಮಹದೇವಯ್ಯ ಮಾತನಾಡಿ ಅವರ ವಿಚಾರಧಾರೆಗಳು ಮತ್ತು ಆಶಯದ ಬಗ್ಗೆ ತಿಳಿಸಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕು ಎಂದು ತಿಳಿಸಿದರು. ಇನ್ನೂ ವಿವಿಧ ಪರ ದಲಿತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬಾ ಸಾಹೇಬರಿಗೆ ಪುಷ್ಪನಮನ ಸಲ್ಲಿಸಿ ಜಯಕಾರದ ಘೋಷಣೆಗಳನ್ನು ಕೂಗಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಜನಾರ್ಧನ್ ನಾಗರಾಜು ನಗರಸಭೆ ಆಯುಕ್ತ ಕರಿಬಸವಯ್ಯ ನಗರಸಭಾ ಸದಸ್ಯರು ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

ವರದಿ- ಹುಲ್ಲಹಳ್ಳಿ ಮೋಹನ್ ಎಕ್ಸ್ ಪ್ರೆಸ್ ಟಿವಿ ನಂಜನಗೂಡು

Continue Reading

Trending

Copyright © 2023 EXPRESS TV KANNADA

canl覺 ma癟 izle selcuksports deneme bonusu deneme bonusu veren siteler bahis siteleri jojobet http://www.iztacalco.cdmx.gob.mx/inicio/guvenilir-bahis-siteleri.html deneme bonusu casino siteleriHacklink SatışıHack forumyaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirdeneme bonusu veren sitelerkareasbet girişBursa EscortBakırköy Escort, Ataköy Escortbahis forumkareasbetbetingo güncel girişdizimatFındıkzade Escortbedavabahis.onlineBitcoin Kabul Eden Bahis Sitelerigüvenilir casino siteleridigital marketing agencydeneme bonusu veren sitelergobahis girişasper casino girişhermesbetTelegram Grupları