ಹುಬ್ಬಳ್ಳಿ: ಮಧ್ಯರಾತ್ರಿ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿ ವಿದ್ಯಾನಗರ ಠಾಣಾ ವ್ತಾಪ್ತಿಯಲ್ಲಿ ಶವವನ್ನು ಎಸೆದು ಹೋಗಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಹಳೆ ಹುಬ್ಬಳ್ಳಿಯ ನಿವಾಸಿ ಶಾರುಖ್ ಸೌದಾಗರ್ ಎಂದು ಗುರುತಿಸಲಾಗಿದೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು ಯುವಕನ ಮೇಲೆ ದಾಳಿ ನಡೆಸಿ ತೊಡೆ ಹಾಗೂ ಬೆನ್ನು ಮೂಳೆ ಮುರಿಯುವಂತೆ ಹೊಡೆದು ಕೊಂದಿದ್ದಾರೆ. ಬಳಿಕ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾರುಖ್ ನ ಮೃತದೇಹ ಎಸೆದಿದ್ದಾರೆ. ಈ ಕೊಲೆಗ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೆಲ ಪೊಲೀಸ್ ಮೂಲಗಳ ಪ್ರಕಾರ ಹಳೇ ವೈಷಮ್ಯದಿಂದ ರೌಡಿಶೀಟರ್ ಸಲೀಂ ಬಳ್ಳಾರಿ ಎಂಬಾತನ ತಂಡ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ-ರಾಜು ಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ