Connect with us

ಕಲಬುರಗಿ

ಜಯಕರ್ನಾಟಕ ಸಂಘಟನೆ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ..

Published

on

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಗುರುಭವನದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಕೊರೊನಾ ವಾರಿಯರ್ಸ್‌ಗಳ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರ ಅರುಣ ಕುಮಾರ್ ಪಾಟೀಲ್ ರಾಜ್ಯಸರ್ಕಾರದ ಕನ್ನಡ ವಿರೋಧಿ ನೀತಿಯಿಂದಾಗಿ ಕನ್ನಡ ಭಾಷೆ, ಸಂಸ್ಕೃತಿಗೆ ಧಕ್ಕೆ ಉಂಟಾಗಿದೆ ಎಂದರು. ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕೊರಳ್ಳಿ ಮಾತನಾಡಿ, ಪೋಷಕರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಕನ್ನಡ ಅಭಿಮಾನ ಬೆಳೆದಾಗ ಮಾತ್ರ ನಾಡು ನುಡಿ ಬೆಳೆಯಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮಾದನ ಹಿಪ್ಪರಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಸಂಘಟನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ರಾಕೇಶ ಕಲ್ಲೂರು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಕೊರೊನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಪುರಸಭೆ, ಪಂಚಾಯಿತಿ ನೌಕರರು, ಪೊಲೀಸ್‌ ಸಿಬ್ಬಂದಿ, ಶಿಕ್ಷಕರು,ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ವರದಿ-ರಾಜಕುಮಾರ್ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ / HEALTH

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

Published

on

By

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ..

ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ..

ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ.

ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ..

ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

ಕಲಬುರಗಿ

ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ..!

Published

on

By

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 30 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಗ್ರಾಮದಲ್ಲಿ ನಡೆಯಿತು. ಆಳಂದ ಪಟ್ಟಣದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೇ ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭಿಸಿಲಾಗಿತು. ಮತ ಎಣಿಕೆ ಮಂದಗತಿಯಲ್ಲಿ ನಡೆದಿದ್ದರಿಂದ ತಡ ರಾತ್ರಿವರೆಗೂ ಎಣಿಕೆ ನಡೆಯಿತು. ಇದರಿಂದ ಫಲಿತಾಂಶಕ್ಕಾಗಿ ಹೊರಗಡೆ ಸಾವಿರಾರು ಜನರು ಚಳಿಯನ್ನು ಲೆಕ್ಕಿಸದೇ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಇನ್ನೂ ಗೆದ್ದ ಅಭರ್ಥಿಗಳು ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ

Continue Reading

ಕಲಬುರಗಿ

ಕಲಬುರಗಿಯಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ- ಡಿಪೋ ಸೇರಿದಂತೆ ಬಸ್ಸ್ ಗಳು ಬಂದ್ ..!

Published

on

By

ಕಲಬುರಗಿ:ನಿನ್ನೆಯಿಂದ ಎಲ್ಲೇಡೆ ಸಾರಿಗೆ ನೌಕರರ ಮುಷ್ಕರ ಜೋರಾಗೆ ಇದ್ದು, ಸರ್ಕಾರದಿಂದ ಮಾತ್ರ ಇದುವರೆಗೂ ಇವರ ಹೋರಾಟಕ್ಕೆ ಯಾವುದೇ ಉತ್ತರ ಬಂದಿಲ್ಲ. ಬೆಂಗಳೂರಿನಲ್ಲಷ್ಟೇ ಅಲ್ಲದೇ ಎಲ್ಲಾ ಉರಿನಲ್ಲೂ ನೌಕರರ ಕೂಗು ಜೊರಾಗೆಯಿದೆ.ಇಂದು ಕಲಬುರುಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸಾರಿಗೆ ನೌಕರರು ಸರಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಆಳಂದದ ಸಾರಿಗೆ ನೌಕಕರು ರಸ್ತೆಗೆ ಇಳಿಯದೆ ಎಲ್ಲಾ ಬಸ್ಸ್ಗಳನ್ನು ಡಿಪೋದಲ್ಲಿ ಹಾಕಿ ಪ್ರತಿಭಟನೆ ನಡೆಸಿದರು.ಸರಕಾರವು ನಮ್ಮನ್ನು ಸರಕಾರಿ ನೌಕರೆಂದು ಪರಿಗಣಿಸಬೇಕು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Continue Reading

Trending

Copyright © 2023 EXPRESS TV KANNADA

kuşadası escort kayseri escort kocaeli escort canlı maç izle selcuksports güvenilir bahis siteleri deneme bonusu deneme bonusu veren siteler bahis siteleri https://resimlihaber.org/ canlı bahis siteleri güvenilir bahis siteleri http://seu.frvm.utn.edu.ar/guvenilir-bahis-siteleri.html deneme bonusu veren sitelercasino sitelerimıknatısmaç izle