ಮಂಡ್ಯ: ಅನೈತಿಕ ಸಂಬಂಧಕ್ಕಾಗಿ ಪ್ರಿಯಕರನ ಜೊತೆ ಸೇರಿ ಪ್ರೀತಿಸಿ ಮದುವೆಯಾದ ಗಂಡನನ್ನೆ ಕೊಲೆ ಮಾಡಿರುವ ಘಟನೆ ಮಂಡ್ಯದ ಹನಕೆರೆಯಲ್ಲಿ ನಡೆದಿದೆ. ಪತ್ನಿ ಶಿಲ್ಪಾ ತನ್ನ ಪ್ರಿಯಕರ ಮಧು ನಾಯಕ್ ಜೊತೆ ಸೇರಿ ಗಂಡನನ್ನೆ ಉಸಿರು ಗಟ್ಟಿಸಿ ಕೊಲೆಗೈದು ನಂತರ ಹೃದಯಾಘಾತವೆಂದು ಬಿಂಬಿಸಿದ್ದಳು. ಇದರಿಂದ ಅನುಮಾನಗೊಂಡ ಗಂಡನ ಸಂಬಂಧಿಕರು ಇದು ಪ್ರೀಪ್ಲ್ಯಾನ್ ಮರ್ಡರ್ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮಾಡಿದಾಗ ನಿಜಾಂಶ ಹೊರಬಂದಿದ್ದು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ವರದಿ- ಎಸ್.ವೆಂಕಟೇಶ್ ಎಕ್ಸ್ಪ್ರೆಸ್ ಟಿವಿ ನಾಗಮಂಗಲ