Connect with us

ತಿಪಟೂರು

ತಿಪಟೂರಿನಲ್ಲಿ ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶ..!

Published

on

ತಿಪಟೂರು: ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್. ಈಶ್ವರಪ್ಪ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆ ವಿಧಾನಸಭೆ ಗೆಲುವಿಗಿಂತ ಹೆಚ್ಚು ಆಸಕ್ತಿ ವಹಿಸಿ ಗ್ರಾಪಂ ಚುನಾವಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ 6 ತಂಡ ಮಾಡಿಕೊಂಡು ಓಡಾಟ ಆರಂಭವಾಗಿದೆ. ಪ್ರತಿ ಜಿಲ್ಲೆಯಲ್ಲಿ 2ಕಡೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದು ಪ್ರತಿಯೊಬ್ಬ ಕಾರ್ಯಕರ್ತನು ದುಡಿಯಬೇಕು. ರಾಜ್ಯದ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಶೇಕಡ 80 ರಷ್ಟು ಅಭ್ಯರ್ಥಿಗಳು ಅಧಿಕಾರ ಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಯಾರು ಕೂಡ ಹೇಳಿಕೆ ಕೊಡದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಆದೇಶವಿದೆ ನಾವು ಆದೇಶ ಪಾಲಿಸಬೇಕಿದೆ ಇದರ ಬಗ್ಗೆ ಕೇಂದ್ರ ನಾಯಕರು ಮುಖ್ಯಮಂತ್ರಿ ರಾಜ್ಯಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಸಂಸದ ಪ್ರತಾಪಸಿಂಹ ಮಾತನಾಡಿ ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಾಯಕರೇ ಕಾರ್ಯಕರ್ತರಾಗಿ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಬಿ ಸುರೇಶಗೌಡ, ಸಂಸದರಾದ ಜಿ ಎಸ್ ಬಸವರಾಜು, ನಾರಾಯಣಸ್ವಾಮಿ,ಶಾಸಕ ಜ್ಯೋತಿಗಣೇಶ್, ಮಸಾಲೆ ಜಯರಾಮ್, ಬಿ ಸಿ ನಾಗೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ-ಸಿದ್ದೇಶ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Continue Reading
Click to comment

Leave a Reply

Your email address will not be published. Required fields are marked *

ತಿಪಟೂರು

ನಾಗರಿಕ ಬಂದೂಕು ತರಭೇತಿ ಶಿಬಿರ ಮುಕ್ತಾಯ- IPS ಡಾ.ಕೆ ವಂಶಿಕೃಷ್ಣ ಅವರಿಂದ ಪ್ರಮಾಣ ಪತ್ರ ವಿತರಣೆ..!

Published

on

By

ತಿಪಟೂರು: ತಿಪಟೂರು ನಗರದ ಕಲ್ಪತರು ಆಡಿಟೋರಿಯಂನಲ್ಲಿ ಪೊಲೀಸ್ ಇಲಾಖೆ ವತಿಯಿಂದ 65ನೇ ನಾಗರೀಕ ಬಂದೂಕು ತರಭೇತಿ ಶಿಬಿರದ ಮುಕ್ತಾಯ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಿರಿಯ ನಾಗರೀಕರು ಹಾಗೂ ಸಾರ್ವಜನಿಕರಿಗೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಒಂದು ವಾರಗಳ ಕಾಲ ಬಂದೂಕು ಗುರಿ, ಹಾಗೂ ಬಂದೂಕು ಉಪಯೋಗಿಸುವ ವಿಧಿ ವಿಧಾನಗಳನ್ನು ತಿಳಿಸಿ ಜೊಡಲಾಗಿತ್ತು. ಮುಕ್ತಾಯದ ದಿನವಾದ ಇಂದು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರಗಳನ್ನು ಮಾನ್ಯ ಪೊಲೀಸ್ ಅಧ್ಯಕ್ಷರಾದ ಡಾ, ಕೆ.ವಂಶಿಕೃಷ್ಣ IPS ರವರು ಪ್ರದಾನ ಮಾಡಿದರು. ತಿಪಟೂರಿನ ಯುವರಾಜ ಪ್ರಥಮ ಗುರಿಕಾರರಾಗಿ ಮೊದಲನೇ ಪ್ರಶಸ್ತಿ ಪಡೆದರು. ಇನ್ನೂ ಈ ಸಂದರ್ಭದಲ್ಲಿ ತಿಪಟೂರಿನ ನಾಲ್ಕನೇ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಶಿವಕುಮಾರ್ ರವರು ಹಾಗೂ ಶಾಸಕರಾದ ಶ್ರೀ ನಾಗೇಶ್ ರವರು ಉಪಸ್ಥಿತಿರಿದ್ದರು. ಇನ್ನೂ ಕಾರ್ಯಕ್ರಮದ ನಿರೂಪಣೆಯನ್ನು, ಹಾಗೂ ನೇತ್ರತ್ವವವನ್ನು ತಿಪಟೂರಿನ ಡಿವೈ ಎಸ್ ಪಿ. ಶ್ರೀ ಚಂದನ್ ಕುಮಾರ್ ರವರು ವಹಿಸಿಕೊಂಡಿದ್ದರು.

ವರದಿ- ಸಿದ್ಧೇಶ್ವರ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Continue Reading

ತಿಪಟೂರು

ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ- ಬಿ.ಸಿ ನಾಗೇಶ್..!

Published

on

By

ತಿಪಟೂರು: ನಗರದ ಎಪಿಎಂಸಿ ಯಾರ್ಡ್ ನಲ್ಲಿ ಆರಂಭವಾದ ರಾಗಿ ಖರೀದಿ ಕೇಂದ್ರಕ್ಕೆ ಶಾಸಕರಾದ ಬಿ.ಸಿ ನಾಗೇಶ್ ಚಾಲನೆ ನೀಡಿದರು.2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಾಲ್ ಗೆ 3295.ರಂತೆ ಖರೀದಿಸಲಾಗುವುದು. ರಾಗಿ ಖರೀದಿ ಕೇಂದ್ರದಲ್ಲಿ ಪೂರ್ಣ ಒಣಗಿದ ಹಾಗೂ ಸ್ವಚ್ಚಗೊಳಿಸಿ ಉತ್ತಮ ಗುಣಮಟ್ಟದ ಮತ್ತು ಗ್ರೇಂಡರ್ ಗಳಿಂದ ದೃಢೀಕರಿಸಿದ ಗುಣಮಟ್ಟದ ರಾಗಿ ಮಾತ್ರ ಖರೀದಿಸಲಾಗುವುದು ಕಳಪೆ ಗುಣಮಟ್ಟದ ರಾಗಿಯನ್ನು ತಿರಸ್ಕರಿಸಲಾಗುವುದು ಮತ್ತು ರೈತರು 2020-21ನೇ ಸಾಲಿಗೆ ನೋಂದಣಿಯನ್ನು ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಗುರುತಿನ ಸಂಖ್ಯೆಯನ್ನು ತರುವುದು ಕಡ್ಡಾಯವಾಗಿದೆ. ಗುರುತಿನ ಸಂಖ್ಯೆಯೊಂದಿಗೆ ಖರೀದಿ ಕೇಂದ್ರಕ್ಕೆ ಬಂದು ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳ ತಕ್ಕದ್ದು ರೈತರು ಫ್ರೂಟ್ಸ್ ಗುರುತು ಸಂಖ್ಯೆಯನ್ನು ನಮೂದಿಸಿದ ನಂತರ ತಾವು ಬೆಳೆದ ರಾಗಿ ದಾಸ್ತಾನನ್ನು ಮಾದರಿಯೊಂದಿಗೆ ಖರೀದಿ ಕೇಂದ್ರಕ್ಕೆ ಬಂದು ಕೃಷಿ ಇಲಾಖೆ ನೇಮಿಸಿರುವ ಗ್ರೇಡರ್ ಗಳಿಂದ ಗುಣಮಟ್ಟ ಉತ್ತಮವಾಗಿದೆ ಎಂದು ದೃಢೀಕರಿಸಿದ ನಂತರ ರಾಗಿಯನ್ನು ನಿಗದಿತ ದಿನಾಂಕ ತಂದು ಮಾರಾಟ ಮಾಡಬಹುದು ಮಾರಾಟವಾದ ನಂತರ ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ- ಸಿದ್ಧೇಶ್ವರ ಸಿ ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Continue Reading

ತಿಪಟೂರು

ಸೇತುವೆ ನಿರ್ಮಾಣಕ್ಕಾಗಿ ಬೈಪಾಸ್ ರಸ್ತೆ ತಡೆ- ಗ್ರಾಮಸ್ಥರ ಆಕ್ರೋಶ..!

Published

on

By

ತಿಪಟೂರು: ತಿಪಟೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರೈತ ವಿರೋಧಿ ಧೋರಣೆ ನಡೆಸುತ್ತಿದ್ದಾರೆ ಎಂದು ತಿಪಟೂರು ತಾಲ್ಲೂಕು, ಕಸಬಾ ಹೋಬಳಿ, ಮಾದಿಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿ ಧರಣಿ ನಡೆಸುತ್ತಿದ್ದಾರೆ.ಮಾದಿಹಳ್ಳಿ ಸರ್ವೆ ನಂಬರ್ 8,9,10,11,12,13 ಮತ್ತು 304ರ ಸರ್ಕಾರಿ ಖರಾಬು ಜಮೀನುಗಳಲ್ಲಿ,ಸರಿ ಸುಮಾರು 10 ರಿಂದ 20 ಅಡಿ ಎತ್ತರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾದುಹೋಗಿದ್ದು, ಈ ರಸ್ತೆಗೆ ಲಗತ್ತಾಗಿರುವ ಅಕ್ಕಪಕ್ಕದ ಗ್ರಾಮದ ರೈತರು, ಮಾದಿಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಪ್ರತಿದಿನ ಸುಮಾರು 50 ರಿಂದ 100ರೈತರು ಹಾಲನ್ನು ಹಾಕುತ್ತಿದ್ದಾರೆ, ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮಾದಿ ಹಳ್ಳಿಯಿಂದ ಕೊಬ್ಬರಿ ದೊಡ್ಡಯ್ಯನ ಪಾಳ್ಯ ಮತ್ತು ವಾಸುದೇವರಹಳ್ಳಿಗೆ ಪ್ರತಿದಿನ ರೈತರು, ಕೃಷಿ ಕಾರ್ಮಿಕರು, ದನ ಕರುಗಳು, ಟ್ರ್ಯಾಕ್ಟರ್ ಜೆಸಿಬಿ ಇನ್ನೀತರ ಯಂತ್ರಗಳು ಹಾಗೂ ಇದೆ ಮಾದಿಹಳ್ಳಿ ಸರ್ಕಾರಿ ಜಮೀನಿನಲ್ಲಿ ಶ್ರೀ ಸಿದ್ಧಪ್ಪ ದೇವಸ್ಥಾನ ಮತ್ತು ಶ್ರೀ ಗಂಗಮ್ಮ ನವರ ಕ್ಷೇತ್ರಕ್ಕೆ ಪ್ರತಿದಿನ ಭಕ್ತಾದಿಗಳು ಕಾಲು ನಡಿಗೆಯಲ್ಲಿ ಹಾಗೂ ದ್ವಿಚಕ್ರ ವಾಹನಗಳ ಮೂಲಕ ಸಂಚರಿಸುತ್ತಿದ್ದು 3 ಸೇತುವೆಗಳ ಅವಶ್ಯಕತೆಯಿದೆ. ಆದ್ದರಿಂದ ಸರ್ಕಾರ ಸೇತುವೆಗಳನ್ನು ನಿರ್ಮಿಸದೆ ಹೋದರೆ ಪ್ರತಿದಿನ ರೈತರು 8 ರಿಂದ 10 ಕಿ ಮೀ ಬಳಸಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗುತ್ತದೆ.ಸರ್ಕಾರ ಹಾಗೂ ಜನಪ್ರತಿನಿಧಿಗಳು ಸೇತುವೆಯನ್ನು ನಿರ್ಮಿಸಿ ಕೊಡಬೇಕೆಂದು ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಗೆ ಅನುಕೂಲ ಮಾಡಿ ಕೊಡಬೇಕೆಂದು ಎಂ ದಯಾನಂದ ಸ್ವಾಮಿ ಗ್ರಾಮಸ್ಥರ ಪರವಾಗಿ ಕೇಳಿಕೊಂಡರು.ಇದೇ ಸಂದರ್ಭದಲ್ಲಿ ಎಂ.ದಯಾನಂದ ಸ್ವಾಮಿ ಪ್ರಕಾಶ್ ಕೆಎಂಎಫ್ ನಿರ್ದೇಶಕರು, ಗಂಗಾಧರಯ್ಯ ಮಾಜಿ ಎಪಿಎಂಸಿ ನಿರ್ದೇಶಕರು,ಮಾಧುಸ್ವಾಮಿ ಗ್ರಾಮ ಪಂಚಾಯಿತಿ ಸದಸ್ಯರು, ಯೋಗಾನಂದ್ ವಕೀಲರು, ಪ್ರಭುಸ್ವಾಮಿ ಎಂ ಎಸ್, ಪ್ರಭುಸ್ವಾಮಿ ನವಿಲೆ, ಯಡಿಯೂರಪ್ಪ, ಕುಮಾರಸ್ವಾಮಿ, ಷಡಾಕ್ಷರಿ,ಸಿದ್ದಮಲ್ಲಯ್ಯ, ಬಸವರಾಜು ಇನ್ನೂ ಮುಂತಾದ ಮಾದಿಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ-ಸಿದ್ಧೇಶ್ವರ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestiPHP Shell indirbetturkeybetturkeybetparkjojobetbetpark girişbetistmarsbahismarsbahis girişdeneme bonusu veren sitelerdeneme bonusu veren sitelerBahis Siteleribetturkeybetturkey girişbetturkeyBinance Kayıt OlmaBetnano girişPusulabetsuperbetinbetturkeycasibomparibahisdeneme bonusu veren sitelercasibomdeneme bonusu veren sitelerportobetBetnano