ಆನೇಕಲ್: ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆ ಆನೇಕಲ್ ತಾಲ್ಲೂಕಿನ ಸಿಂಗೇನ ಅಗ್ರಹಾರದಲ್ಲಿರುವ ಫ್ರೂಟ್ ಮಾರ್ಕೆಟ್ ಸಂಪೂರ್ಣ ಬಂದ್ ಆಗಿತ್ತು. 300 ರಿಂದ 400 ಅಂಗಡಿಗಳನ್ನು ಹೊಂದಿರುವ ಈ ಮಾರುಕಟ್ಟೆಯಲ್ಲಿ ಬೆಂಗಳೂರು, ತಮಿಳುನಾಡು, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಹಣ್ಣುಗಳು ಬಂದು ಮಾರಾಟವಾಗುತ್ತವೆ, ಆದರೆ ಇಂದು ಸಂಪೂರ್ಣವಾಗಿ ಬಂದ್ ಆಗಿತ್ತು. ಆದ್ರೆ ಬೆಂಗಳೂರು- ಚೆನ್ನೈ ಹೆದ್ದಾರಿಯಲ್ಲಿ ಎಂದಿನಂತೆ ವಾಹನ ಸಂಚಾರ ಕಂಡು ಬಂತು. ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳು ಕೂಡ ಎಂದಿನಂತೆ ಸಂಚರಿಸಿದವು.
ವರದಿ-ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್