ಮಂಡ್ಯ

ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಅಂಬೇಡ್ಕರ್ ಕ್ರಾಂತಿ ದಳ ರಾಜ್ಯಾಧ್ಯಕ್ಷ ನಾಗರಾಜು ಬಂಧನ..!

Published

on

ಮಳವಳ್ಳಿ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅಂಬೇಡ್ಕರ್ ಕ್ರಾಂತಿ ದಳದ ರಾಜ್ಯಾಧ್ಯಕ್ಷ ಡಾ. ಬಿ.ಆರ್ ನಾಗರಾಜುರವರನ್ನು ಬಂಧಿಸಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಅಂಬೇಡ್ಕರ್ ಕ್ರಾಂತಿ ದಳದ ರಾಜ್ಯಾಧ್ಯಕ್ಷ ಡಾ. ಬಿ.ಆರ್ ನಾಗರಾಜು ರವರು ಇಂದು ಗ್ರಾಮಾಂತರ ಪೊಲೀಸಠಾಣೆ ತೆರಳಿ ಸಬ್ ಇನ್ಸ್ ಪೆಕ್ಟರ್ ಡಿ.ರವಿಕುಮಾರ್ ಜೊತೆ ಗಲಾಟೆ ಮಾಡಿದ್ದು, ಕರ್ತವ್ಯ ಕ್ಕೆ ಅಡ್ಡಪಡ್ಡಿದ ಹಿನ್ನಲೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಡಿ ರವಿಕುಮಾರ್ ರವರು ಮಳವಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಅಂಬೇಡ್ಕರ್ ಕ್ರಾಂತಿ ದಳದ ರಾಜ್ಯಾಧ್ಯಕ್ಷ ಡಾ. ಬಿ.ಆರ್ ನಾಗರಾಜು ರವರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು ಆರೋಪಿ ನಾಗರಾಜು ರವರು ಮಂಡ್ಯ ಜೈಲ್ ಗೆ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಇನ್ನೂ ಇತ್ತೀಚಿಗೆ ಇದೇ ನಾಗರಾಜುರವರು ಸಬ್ ಇನ್ಸ್ ಪೆಕ್ಟರ್ ಡಿ.ರವಿಕುಮಾರ್ ರವರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಆರೋಪಿಸಿ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಅರೆಬೆತ್ತಲೆ ಮಾಡಿದ್ದನು ಎನ್ನಲಾಗಿದೆ..

ವರದಿ- ಎ.ಎನ್ ಲೋಕೇಶ್ ಎಕ್ಸ್ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version