ಮಳವಳ್ಳಿ: ಎ.ಎಸ್ ದೇವರಾಜು ಅಭಿಮಾನಿಗಳ ಬಳಗ ವತಿಯಿಂದ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಮಾಜಿ ಅದ್ಯಕ್ಷ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎ.ಎಸ್ ದೇವರಾಜ್ ರವರಿಗೆ ಅಭಿನಂದನಾ ಸಮಾರಂಭವನ್ನು ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಇನ್ನೂ ಈ ಕಾರ್ಯಕ್ರಮವನ್ನು ಗ್ರಾಮೀಣ ಪಂಚಾಯಿತಿ ಅಭಿವೃದ್ಧಿ ಇಲಾಖೆ ನಿರ್ದೇಶಕ ಯಾಲಕ್ಕಿಗೌಡ ರವರು ಉದ್ಘಾಟಿಸಿ ಮಾತನಾಡಿ, ಕೇವಲ ಮಕ್ಕಳಿಗೆ ಪುಸ್ತಕದ ಪಠ್ಯಗಳನ್ನು ಮಾತ್ರ ಹೇಳಿಕೊಡದೇ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್, ಐಎಎಸ್ ಪರೀಕ್ಷೆಗೆ ತಯಾರಿ ಮಾಡಿ ಎಂದು ಶಿಕ್ಷಕರಿಗೆ ತಿಳಿಸಿದರು. ಇನ್ನೂ ಮಳವಳ್ಳಿ ತಾಲ್ಲೂಕಿನ ಮಾರಗೌಡನ ಹಳ್ಳಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ಎ.ಎಸ್ ದೇವರಾಜು ರವರು ಆ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮಶಾಲೆ ಎಂಬ ಹೆಸರು ಪಡೆಯಲು ಕಾರಣ ಕರ್ತರಾಗಿದ್ದಾರೆ ಎಂದರು. ಇದೇ ವೇಳೆ ನಿವೃತ್ತ ಮುಖ್ಯ ಶಿಕ್ಷಕ ಎ.ಎಸ್ ದೇವರಾಜು ಮತ್ತು ದಂಪತಿ ರವರನ್ನು ಗಣ್ಯರಿಂದ ಅಭಿನಂದಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕ ಶಿವಮಾದಪ್ಪ, ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದಾಧ್ಯಕ್ಷ ಬೋರೇಗೌಡ, ಕ್ಷೇತ್ರಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ಡಯಟ್ ನ ನಿವೃತ್ತ ಪ್ರಾಂಶುಪಾಲ ಗೋಪಾಲ, ಸರ್ಕಾರಿ ನೌಕರರಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು.
ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ