ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆರ್ ಎಸ್ಎಸ್ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಭೂಪೇಂದ್ರ ಯಾದವ್, ಸಂಘದ ನಾಯಕರ ಜೊತೆಗೆ ಸುಧೀರ್ಘ ಸಮಯ ಮಾತುಕತೆ ನಡೆಸಿದ್ದಾರೆ. ರಾಜ್ಯದ ರಾಜಕೀಯದಲ್ಲಿ ಬದಲಾವಣೆ, ವಿದ್ಯಾಮಾನಗಳ ಹಿನ್ನೆಲೆಯಲ್ಲಿ ರಹಸ್ಯ ಭೇಟಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು