ಅರಸೀಕೆರೆ:60 ವರ್ಷದ ರೈತ ಸೋಮಶೇಖರ್ ಎಂಬಾತ ನಿನ್ನೇ ಸಂಜೆ 7ಗಂಟೆಯ ಸಮಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಾಗತಿಹಳ್ಳಿ ಎಂಬಾ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗಿನ ಜಾವ ಸುಮಾರು 4ಗಂಟೆಗೆ ಮೃತಪಟ್ಟಿದ್ದಾರೆ. ಬ್ಯಾಂಕ್ ನಲ್ಲಿ ಒಂದು ಲಕ್ಷ ಸಾಲ ಪಡೆದಿದ್ದ ಆತ ಸಾಲತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ಸಂಬಂಧ ಗಂಡಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವರದಿ- ಜೀವನ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಅರಸೀಕೆರೆ