Connect with us

ಮಂಡ್ಯ

23 ನೇ ವಿಶ್ವ ವಿಕಲಚೇತನರ ದಿನಾಚರಣೆ- ಡಾ.ವೀರಭದ್ರಪ್ಪ..!

Published

on

ಮಳವಳ್ಳಿ: ಮಳವಳ್ಳಿ ಪಟ್ಟಣದ ಸಮುದಾಯ ಆವರಣದಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಯೋಜನೆ, ಮತ್ತು ಕೀರ್ತಿ ವಿಕಲಚೇತನರ ಕ್ಷೇಮಾಭಿವೃದ್ಧಿ ಹಾಗೂ ತಾಲ್ಲೂಕಿನ ಎಲ್ಲಾ ವಿಕಲಚೇತನರ ಸ್ವ ಸಹಾಯ ಸಂಘಗಳ ಸಂಯುಕ್ತಾಶ್ರಯದಲ್ಲಿ 23 ನೇ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇನ್ನೂ ಈ ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ವೀರಭದ್ರಪ್ಪ ಉದ್ಘಾಟಿಸಿ ಮಾತನಾಡಿ, ವಿಕಲಚೇತನರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ನೀಡುತ್ತಿದ್ದು ಅದನ್ನು ಪಡೆದುಕೊಂಡು ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.ವಿಕಲಚೇತನರಿಗೆ ಸರ್ಟಿಫಿಕೇಟ್ ಮಾಡಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು ,ಅವರನ್ನು ಬಿಟ್ಟು ನೇರವಾಗಿ ನೀವುಗಳೇ ತಾಲ್ಲೂಕು ವೈದ್ಯಾಧಿಕಾರಿಗಳ ಬಳಿ ಹೋಗಿ, ವಿಕಲಚೇತನರಿಗೆ 21 ವಿವಿದ ಅಂಗವಿಕಲಕತೆ ಇದ್ದು, ಶೇಕಡಾವಾರು ನಿಗದಿಯನ್ನು ಸರ್ಕಾರ ಮಾಡಿದೆ ಅದರಂತೆ ನೀವು ಪಡೆದುಕೊಳ್ಳಬೇಕು ಎಂದು ತಿಳಿಸದರು. ಇನ್ನೂ ಈ ಕಾರ್ಯಕ್ರಮದಲ್ಲಿ ರಮಣ ಮಹಿರ್ಷಿ ಸಂಸ್ಥೆ ಕಾರ್ಯನಿರ್ವಾಹಣಾಧಿಕಾರಿ ಪಾರ್ಥಿಪನ್ ,ಸಮುದಾಯ ಸಂಸ್ಥೆಯ ಸಂಯೋಜಕಿ ನೀಲಾ, ಸಮುದಾಯ ಕಂಪ್ಯೂಟರ್ ಸೆಂಟರ್ ಮುಖ್ಯಸ್ಥ ಕೃಷ್ಣಮೂರ್ತಿ, ಕರ್ನಾಟಕ ಪ್ರಾಂತ ರೈತ ಸಂಘ ಅಧ್ಯಕ್ಷ ಭರತ್ ರಾಜ್, ಎ.ಎಸ್ ಪರಶಿವಮೂರ್ತಿ.ಎಸಿಡಿಪಿ ಓ ಮಹೇಶ್,ಮಹದೇವಸ್ವಾಮಿ, ಸೇರಿದಂತೆ ಮತ್ತಿತ್ತರರು ಭಾಗಿಯಾಗಿದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿಗೆ 2021 ರಲ್ಲಿ ನಡೆಯಲಿರುವ ಕಸಪಾ ಚುನಾವಣೆ ಪ್ರಚಾರ..!

Published

on

By

ಮಳವಳ್ಳಿ: ಕನ್ನಡ ಸಾಹಿತ್ಯ ಪರಿಷತ್ತಿಗೆ 2021 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವರ್ಧಿಸಲಿರುವ ಚನ್ನೇಗೌಡರು ಮಳವಳ್ಳಿ ಪಟ್ಟಣದ ವಿಶ್ವ ಮಾನವ ವಿಚಾರ ವೇದಿಕೆ ಕಚೇರಿಗೆ ಇಂದು ಭೇಟಿ ನೀಡಿದರು. ಇದೇ ವೇಳೆ ಚನ್ನೇಗೌಡರವರು ಮಾತನಾಡಿ, ಕಸಪಾದಲ್ಲಿ ಮತ್ತಷ್ಟು ಸುಧಾರಣೆಯಾಗಬೇಕಾಗಿದೆ. ಕನ್ನಡ ಪರ ಸಂಘಟನೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಗೆ ಸೇರಿಸಿಕೊಂಡು ಕನ್ನಡ ಪರ ಹೋರಾಟ ಮಾಡಬೇಕಾಗಿದೆ. ಇದಲ್ಲದೆ ಕನ್ನಡವನ್ನು ಉಳಿಸಬೇಕಾಗಿದೆ ಎಂದರು. ಇನ್ನೂ ಯುವ ಬರಹಗಾರರಗಳನ್ನು ಹೊರತರುವ ಕೆಲಸವನ್ನು ಕಸಪಾ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ನಿಲುವುಗಳನ್ನು ಮುಂದೆ ಇಟ್ಟುಕೊಂಡು ನಾನು ಚುನಾವಣೆಯಲ್ಲಿ ಸ್ವರ್ಧಿಸುತ್ತಿದ್ದೇನೆ ಎಂದರು. ಈ ಭಾರಿ ನನ್ನನ್ನು ಆಯ್ಕೆ ಮಾಡಲು ನಿಮ್ಮ ಸಹಕಾರ ಬೇಕು. ಇದಲ್ಲದೆ ನಾನು ಸಹ ಮಂಡ್ಯ ಜಿಲ್ಲೆಯವನು ಕಸಪಾ ಪ್ರಗತಿಗೆ ನಾವೆಲ್ಲರೂ ಒಟ್ಟಾಗಿ ಅಭಿವೃದ್ಧಿ ಪಡಿಸೋಣ ಎಂದರು.ಇನ್ನೂ ಈ ಕಾರ್ಯಕ್ರಮದಲ್ಲಿ ವಿಶ್ವಮಾನವ ವಿಚಾರ ವೇದಿಕೆ ಅಧ್ಯಕ್ಷ ಮ.ಸಿ ನಾರಾಯಣ, ಪ್ರಧಾನ ಕಾರ್ಯದರ್ಶಿ ನಾಗೇಶ್, ಖಜಾಂಚಿ ಡಾ.ಮಹದೇವ, ಕಸಪಾ ತಾಲ್ಲೂಕು ಅಧ್ಯಕ್ಷ ದೇವರಾಜು, ಪ್ರಾಂತ ರೈತ ಸಂಘದ ಅಧ್ಯಕ್ಷ ಭರತ್ ರಾಜ್ ಇದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Continue Reading

ಮಂಡ್ಯ

ಬಿಜೆಪಿ ಅಧ್ಯಕ್ಷ ನಂಜುಂಡೇಗೌಡರ ವಿರುದ್ಧ ಗುಡುಗಿದ ರೈತ ಸಂಘದ ಅಧ್ಯಕ್ಷ ಎನ್ಎಲ್ ಭರತ್ ರಾಜ್..!

Published

on

By

ಮಳವಳ್ಳಿ: ತನ್ನನ್ನು ತಾನು ಬಿಜೆಪಿಗೆ ಮಾರಿಕೊಂಡಿರುವ ನಂಜುಂಡೇಗೌಡರು ರೈತರ ಬಗ್ಗೆ ಮಾತನಾಡುವ ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಹಾಗೂ ರೈತರ ಪ್ರತಿನಿಧಿಯಾಗಲು ಯೋಗ್ಯತೆ ಇಲ್ಲ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರಾದ ಎನ್ಎಲ್ ಭರತ್ ರಾಜ್ ಆರೋಪಿಸಿದ್ದಾರೆ. ಮಳವಳ್ಳಿಯ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಚಾರಿತ್ರಿಕ ವಾದದ್ದು, ಸ್ವಾತಂತ್ರ್ಯ ಚಳುವಳಿಯ ನಂತರದ ಧೀರೋದ್ಧಾತ ಹಾಗೂ ಐತಿಹಾಸಿಕವಾದ ಚಳುವಳಿಯನ್ನು ದಲ್ಲಾಳಿಗಳ ಹೋರಾಟ ಎಂದು ನಂಜುಂಡೇಗೌಡರು ಕರೆದಿರುವುದು ಅವರು ಬಿಜೆಪಿ ಗುಲಾಮರಾಗಿರುವುದಕ್ಕೆ ಸಾಕ್ಷಿಯಾಗಿದೆ. ರೈತ ಸಂಘಟನೆಯ ಮೂಲಕ ಬೆಳೆದು ಬಂದು ತನ್ನ ಬೆಳೆಸಿದ ರೈತ ಕುಲಕ್ಕೆ ವಿಷ ಉಣಿಸುತ್ತಿದ್ದಾರೆ, ಅವರ ನೆಚ್ಚಿನ ನಾಯಕ ನರೇಂದ್ರ ಮೋದಿ ಅದಾನಿಯ, ಅಂಬಾನಿಯ ಗುಲಾಮನಾಗಿ ರೈತ ವಿರೋಧಿ ವಿದ್ಯುತ್ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯಿದೆಗಳಿಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದು ಯಾವ ಸದನಗಳಲ್ಲೂ ಚರ್ಚಿಸದೆ, ಚಳಿಗಾಲದ ಸಂಸತ್ ಅಧಿವೇಶನವನ್ನು ರದ್ದು ಪಡಿಸಿ ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು. ಮೋದಿ ಪ್ರಜಾಪ್ರಭುತ್ವದ ಕೊಲೆಗಾರ ಭಾರತದ ದಿವಾಳಿಕೋರ, ಬಂಡವಾಳ ಶಾಹಿಗಳ ದಾಸಾನುದಾಸ, ಕೃಷಿ ವಲಯ ಕೈಗಾರಿಕಾ ವಲಯಗಳನ್ನ ಹಾಳು ಮಾಡಿ ಬಡತನ ನಿರುದ್ಯೋಗ ಅಸಮಾನತೆ ಅಸಹಿಷ್ಣುತೆಯನ್ನ ಹುಟ್ಟುಹಾಕಿರುವ ಗೋಮುಖ ವ್ಯಾಘ್ರನನ್ನ ನಂಜುಂಡೆಗೌಡರು ಸಮರ್ಥಿಸಿಕೊಳ್ಳುವುದು ರೈತ ದ್ರೋಹಿ ಕೆಲಸವಾಗಿದೆ ಇದೇ ನೀತಿಗಳನ್ನು ವಿರೋಧಿಸಿ ರಾಜ್ಯ ರೈತ ಸಂಘದಲ್ಲಿದ್ದಾಗ ಮೂರ್ನಾಲ್ಕು ದಶಕಗಳ ಕಾಲ ಹೋರಾಟ ಮಾಡಿರುವುದನ್ನು ಮರೆತು ಮಾತನಾಡುತ್ತಿದ್ದಾರೆ ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನವಿದ್ದರೆ ತನ್ನನ್ನು ಬೆಳೆಸಿದ ರೈತರಿಗೆ ದ್ರೋಹ ಬಗೆಯದೆ ಹಸಿರು ಟವಲ್ ನ್ನು ಬಿಜೆಪಿಗೆ ಒತ್ತೆ ಇಡದೆ ಸಾಮಾನ್ಯ ಮನುಷ್ಯನಾಗಿ ಬಾಳಿ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯಿಸುತ್ತದೆ ಎಂದರು ಇನ್ನೂ ಪತ್ರಿಕಾಗೋಷ್ಠಿಯಲ್ಲಿ ಪ್ರಾಂತ ರೈತ ಸಂಘ ಪ್ರಧಾನ ಕಾರ್ಯದರ್ಶಿ ಲಿಂಗರಾಜುಮೂರ್ತಿ, ಆನಂದ್ ಚಿಕ್ಕಮೊಗಣ್ಣ ಸಿದ್ದೇಗೌಡ ದಾಸಬೋವಿ, ಕರಿಯಪ್ಪ, ಭಾಗವಹಿಸಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Continue Reading

ಮಂಡ್ಯ

ಕುವೆಂಪು ದಿನಾಚರಣೆ ಹಾಗೂ ದಿನಶೀರ್ಷಿಕೆ ಬಿಡುಗಡೆ..!

Published

on

By

ಮಳವಳ್ಳಿ: ವಿಶ್ವ ಮಾನವ ವಿಚಾರ ವೇದಿಕೆ ವತಿಯಿಂದ ಕುವೆಂಪುರವರ 116 ನೇ ವರ್ಷ ಜನ್ಮ ದಿನಾಚರಣೆ ಹಾಗೂ ದಿನ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ವಿಶ್ವ ಮಾನವ ವಿಚಾರ ವೇದಿಕೆ ಕಚೇರಿಯ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪುರಸಭಾಧ್ಯಕ್ಷೆ ರಾಧ ನಾಗರಾಜುರವರು ಉದ್ಘಾಟಿಸಿದರು.ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿರವರು ಮಾತನಾಡಿ ವಿಚಾರವಂತರ ನಡುವೆ ನಾವೆಲ್ಲ ಇದ್ದೇವೆ ಎನ್ನುವುದೇ ಸಮಾದಾನದ ಸಂಗತಿ,ವಿಚಾರವಂತರಿಗೆ ತೊಂದರೆ ತಪ್ಪಿದ್ದಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಇನ್ನೂ ಇದೇ ವೇಳೆ ಹಂದಿನಾಗಣ್ಣ, ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ.ರಾಮಕೃಷ್ಣ, ಹಿರಿಯ ರಂಗಕಲಾವಿದ ಪುಟ್ಟಸ್ವಾಮಾಚಾರ್ಯ,ಜಯರಾಜು ರವರನ್ನು ಸನ್ಮಾನಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ವಿಶ್ವ ಮಾನವ ವಿಚಾರ ವೇದಿಕೆ ಅಧ್ಯಕ್ಷ ಮ.ಸಿ ನಾರಾಯಣ, ಪ್ರಧಾನ ಕಾರ್ಯದರ್ಶಿ ನಾಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ, ನಾಗರಾಜು, ವಿಶ್ವಗುರು ಸೊಸೈಟಿ ಅಧ್ಯಕ್ಷ ಕೃಷ್ಣಶೆಟ್ಟಿ, ಭರತ್ ರಾಜ್ ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Continue Reading

Trending

Copyright © 2023 EXPRESS TV KANNADA

yaş sınırı olmayan bahis sitelerikareasbetdeneme bonusu veren sitelertürbanlı escortsiyah bayrak ayna amirkareasbet girişbakırköy escortkareasbetbetingo güncel girişdizimatFındıkzade EscortBitcoin Kabul Eden Bahis Sitelerigüvenilir casino sitelerigobahis girişasper casino girişesbet girişbullbahis girişbenimbahis girişbenimbahisGüvenilir poker siteleriSüper Ligizmir escortBakırköy Escortyabancı diziesenyurt escortistanbul escortbeylikdüzü escortbeylikduzu escortbeylikduzu escortbahceşehir escortbeylikdüzü escortesenyurt escortbeylikdüzü escortistanbul escort30 TL Bonus Veren Bahis Siteleri betmatikmariobetonwinbetistsüpertotobetgrandpashabet telegramBetist Girişbullbahisbullbahisen iyi slot sitelerixslot giriş adresitipobet365ilk yatırım bonusu veren sitelerizmir travestijojobetbetistmarsbahismarsbahis girişdeneme bonusu veren sitelerdeneme bonusu veren sitelerBahis SiteleriBinance Kayıt Olmasuperbetindeneme bonusu veren sitelerdeneme bonusu veren sitelerextrabetoleybet giriş adresiextrabetelitcasinobetkomsonbahisEntrümpelung firmaefesbetYouwin girişTipobetHack forumBetturkeybetcupAjaxbettipobetdeneme bonusu veren sitelerdeneme bonusubetmatikbahiscompiabetmariobetbetkomportobet