ರಾಯಚೂರು: ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಕಾಂಪೌಂಡಿನ ಪಕ್ಕಾ ವೀರಶೈವ ಕಾಲೇಜ್ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥೀತಿ ನಿರ್ಮಾಣವಾಗಿದೆ. ಕಸ ತಿನ್ನಲು ಹಂದಿಗಳು ಓಡಾಡುತ್ತಿದ್ದು, ಕಸದ ವಾಸನೆ ಜೊತೆ ಹಂದಿಗಳ ದುರ್ವಾಸನೆಯನ್ನು ಸಾರ್ವಜನಿಕರು ಅನುಭವಿಸುತ್ತಿದ್ದು ಜನರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ. ಇನ್ನೂ ಸಂಬಂಧ ಪಟ್ಟಂತಹ ಅಧಿಕಾರಿಗಳಿಗೆ ದೂರು ನೀಡಿದರು ಯಾವೊಬ್ಬ ಅಧಿಕಾರಿಯು ಇತ್ತ ಗಮನ ಹರಿಸದೇ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ವರದಿ: ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು